Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರೊಂದಿಗೆ ಒಂದು ದಿನಕ್ಕೆ ವರ್ಷದ ಸಂಭ್ರಮ : ಸಚಿವ ಬಿ ಸಿ ಪಾಟೀಲ್ ಗೆ ಹರುಷ

Facebook
Twitter
Telegram
WhatsApp

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮಹತ್ವಾಕಾಂಕ್ಷೆಯ ರೈತರೊಂದಿಗೊಂದು ದಿನ ಕಾರ್ಯಕ್ರಮಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಇದೇ ಖುಷಿಯಲ್ಲಿ ಸಚಿವ ಬಿ ಸಿ ಪಾಟೀಲ್ ತಮ್ಮ ಹುಟ್ಟುಹಬ್ಬವನ್ನ ರೈತರೊಂದಿಗೆ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕಳೆದ ಬಾರಿಯೂ ಅವರ ಹುಟ್ಟುಹಬ್ಬವನ್ನ ರೈತರೊಟ್ಟಿಗೇನೆ ಆಚರಿಸಿದ್ದರು. ಅಂದ್ಹಾಗೆ ನ.14 ಬಿ ಸಿಪಾಟೀಲರ ಜನ್ಮದಿನ.

ರೈತರಿಗೆ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಆತ್ಮಹತ್ಯೆ ತಡೆಗಟ್ಟಿ ಕೋಲಾರ ಮಾದರಿಯ ಸಮಗ್ರ ಕೃಷಿ ಪದ್ಧತಿ ಅಳವಡಿಸಲು ರೈತರಲ್ಲಿ ಈ ಕುರಿತು ಜಾಗೃತಿ ಹೆಚ್ಚಿಸಲು ಆರಂಭವಾಗಿದ್ದೇ “ರೈತರೊಂದಿಗೊಂದು ದಿನ”. ಕಳೆದ ನ.14 ರಂದು ಆರಂಭವಾದ ಈ ದಿನ ಈಗ ಒಂದು ವರ್ಷ ಪೂರೈಸುತ್ತಿದ್ದು, ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಕೃಷಿ ಇಲಾಖೆಗೆ ಸ್ವಯಂಪ್ರೇರಿತರಾಗಿ ರಾಯಭಾರಿಯಾಗಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಈ ಬಾರಿಯ “ರೈತರೊಂದಿಗೊಂದು ದಿನ” ಕಾರ್ಯಕ್ರಮದಲ್ಲಿ ಕೃಷಿ ಸಚಿವರೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ.

ರೈತರೊಂದಿಗೊಂದು ದಿನ ಈಗಾಗಲೇ 10 ಜಿಲ್ಲೆಗಳಲ್ಲಿ ನಡೆದಿದ್ದು, ಹಾವೇರಿ 11 ನೇ ಜಿಲ್ಲೆಯಾಗಿದೆ. ಬಿ.ಸಿ.ಪಾಟೀಲರು ಕೋವಿಡ್ ನಿರ್ಬಂಧದಲ್ಲಿಯೂ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ರೈತರ ಸಂಕಷ್ಟವನ್ನು ಅರಿಯುವ ಪ್ರಯತ್ನ ಮಾಡಿದ್ದರು. ಇದೆಲ್ಲದರಿಂದ ರೂಪತಳೆದಿದ್ದೇ “ರೈತರೊಂದಿಗೊಂದು ದಿನ”. ಕೃಷಿ ಸಚಿವರು ಹಾಗೂ ಕೃಷಿ ಅಧಿಕಾರಿಗಳು ರೈತರ ಬಳಿಯೇ ತೆರಳಿ ಅವರ ಸಂಕಷ್ಟವನ್ನು ಅರಿತು ಸಾಧ್ಯವಾದಲ್ಲಿ ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಂದ್ಹಾಗೆ ಈ ಬಾರಿಯ ರೈತರೊಂದಿಗೊಂದು ದಿನ ಕೃಷಿ ಸಚಿವರ ಮತಕ್ಷೇತ್ರ ಹಿರೇಕೆರೂರಿನಲ್ಲಿ ಆಯೋಜನೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!