Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

PSI ಮರು ಪರೀಕ್ಷೆ: ಈ ಬಾರಿಯೂ ನಕಲಿಯಾಗುವ ಆತಂಕ : ಅಭ್ಯರ್ಥಿಗಳಿಗೆ ಗೃಹಸಚಿವರು ಏನಂದ್ರು..?

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ಕಳೆದ ಬಾರಿ ಪಿಎಸ್ಐ ಪರೀಕ್ಷೆಗಾಗಿ ಸಾಕಷ್ಟು ಕಷ್ಟಪಟ್ಟು ಓದಿದ್ದ ಅದೆಷ್ಟೋ ಅಭ್ಯರ್ಥಿಗಳು ಕಣ್ಣೀರು ಹಾಕಿದ್ದರು. ನಕಲಿ ಮಾಡಿದ್ದರ ಪರಿಣಾಮ ಎಷ್ಟೋ ಅಭ್ಯರ್ಥಿಗಳಿಗೆ ಇದರಿಂದ ಸಮಸ್ಯೆ ಉಂಟಾಗಿತ್ತು. ಅಭ್ಯರ್ಥಿಗಳು ಮನವಿ ಮಾಡಿದರು, ಮರು ಪರೀಕ್ಷೆಗೆ ಆದೇಶ ನೀಡಲಾಗಿತ್ತು. ಇದೀಗ ಮರುಪರೀಕ್ಷೆ ಅಭ್ಯರ್ಥಿಗಳು ಸಿದ್ಧತೆ ನಡೆಸಿಕೊಂಡಿದ್ದಾರೆ.

ಆದರೆ ಇದರ ನಡುವೆ ಮತ್ತೆ ಏನಾದರೂ ಯಡವಟ್ಟು ಆದರೆ ಎಂಬ ಆತಂಕ ಸಹಜವಾಗಿಯೇ ಇದೆ. ಹೀಗಾಗಿ ಅಭ್ಯರ್ಥಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಧೈರ್ಯ ನೀಡಿದ್ದಾರೆ. ಗುಪ್ತದಳದ ಪರಿಶೀಲನೆ ವೇಳೆ ಈ ರೀತಿಯ ಮಾಹಿತಿ ಹೊರಬಿದ್ದಿದೆ. ಸಿಸಿಬಿ ಪೊಲೀಸರು ಕೂಲಂಕುಶವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಭಯವಿಲ್ಲ. ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬೆಂಗಳೂರಿನಲ್ಲೆ ಪರೀಕ್ಷೆ ನಡೆಸುತ್ತಿದ್ದೇವೆ. ಅಭ್ಯರ್ಥಿಗಳಿಗೆ ಚಿಂತೆ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ಕೆಲವು ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಕುಲಂಕುಶವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ ಎಂದಿದ್ದಾರೆ. ಈ ಮೂಲಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಒಂದಷ್ಟು ಮನಸ್ಥೈರ್ಯ ತುಂಬಿದ್ದಾರೆ. ಆತಂಕವನ್ನು ಕಳೆದು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವುದಕ್ಕೆ ಪ್ರೋತ್ಸಾಹ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment