Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PSI ಮರು ಪರೀಕ್ಷೆ: ಈ ಬಾರಿಯೂ ನಕಲಿಯಾಗುವ ಆತಂಕ : ಅಭ್ಯರ್ಥಿಗಳಿಗೆ ಗೃಹಸಚಿವರು ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಬಾರಿ ಪಿಎಸ್ಐ ಪರೀಕ್ಷೆಗಾಗಿ ಸಾಕಷ್ಟು ಕಷ್ಟಪಟ್ಟು ಓದಿದ್ದ ಅದೆಷ್ಟೋ ಅಭ್ಯರ್ಥಿಗಳು ಕಣ್ಣೀರು ಹಾಕಿದ್ದರು. ನಕಲಿ ಮಾಡಿದ್ದರ ಪರಿಣಾಮ ಎಷ್ಟೋ ಅಭ್ಯರ್ಥಿಗಳಿಗೆ ಇದರಿಂದ ಸಮಸ್ಯೆ ಉಂಟಾಗಿತ್ತು. ಅಭ್ಯರ್ಥಿಗಳು ಮನವಿ ಮಾಡಿದರು, ಮರು ಪರೀಕ್ಷೆಗೆ ಆದೇಶ ನೀಡಲಾಗಿತ್ತು. ಇದೀಗ ಮರುಪರೀಕ್ಷೆ ಅಭ್ಯರ್ಥಿಗಳು ಸಿದ್ಧತೆ ನಡೆಸಿಕೊಂಡಿದ್ದಾರೆ.

ಆದರೆ ಇದರ ನಡುವೆ ಮತ್ತೆ ಏನಾದರೂ ಯಡವಟ್ಟು ಆದರೆ ಎಂಬ ಆತಂಕ ಸಹಜವಾಗಿಯೇ ಇದೆ. ಹೀಗಾಗಿ ಅಭ್ಯರ್ಥಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಧೈರ್ಯ ನೀಡಿದ್ದಾರೆ. ಗುಪ್ತದಳದ ಪರಿಶೀಲನೆ ವೇಳೆ ಈ ರೀತಿಯ ಮಾಹಿತಿ ಹೊರಬಿದ್ದಿದೆ. ಸಿಸಿಬಿ ಪೊಲೀಸರು ಕೂಲಂಕುಶವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಭಯವಿಲ್ಲ. ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬೆಂಗಳೂರಿನಲ್ಲೆ ಪರೀಕ್ಷೆ ನಡೆಸುತ್ತಿದ್ದೇವೆ. ಅಭ್ಯರ್ಥಿಗಳಿಗೆ ಚಿಂತೆ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

ಕೆಲವು ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಕುಲಂಕುಶವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ ಎಂದಿದ್ದಾರೆ. ಈ ಮೂಲಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಒಂದಷ್ಟು ಮನಸ್ಥೈರ್ಯ ತುಂಬಿದ್ದಾರೆ. ಆತಂಕವನ್ನು ಕಳೆದು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವುದಕ್ಕೆ ಪ್ರೋತ್ಸಾಹ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!