Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಗೋಲಿಯಲ್ಲಿ ಅರಳಿದ ಶ್ರೀ ರಾಮನ ಚಿತ್ರ | ಕಣ್ಮನ ಸೆಳೆದ  ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷಧಾರಿ ಮಕ್ಕಳು

Facebook
Twitter
Telegram
WhatsApp

ಸುದ್ದಿಒನ್, ದಾವಣಗೆರೆ, ಜನವರಿ.21  : ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಉದ್ಯಾನದಲ್ಲಿ 

‘ಸೂಪರ್ ಮಾಮ್ಸ್ ಆಫ್ ದಾವಣಗೆರೆ’ ಮಹಿಳಾ ತಂಡದ ಸದಸ್ಯೆಯರು  ದೀಪ ಬೆಳಗುವ ಮೂಲಕ ‘ಶ್ರೀರಾಮ ದೀಪಾವಳಿ’ ಆಚರಿಸಿದರು.

ಇದಕ್ಕೂ ಮೊದಲು ಸೂಪರ್ ಮಾಮ್ಸ್ ಆಫ್ ದಾವಣಗೆರೆ ವತಿಯಿಂದ ಮಹಿಳೆಯರು ವಿದ್ಯಾನಗರದ ಶಿವ ಪಾರ್ವತಿ ದೇವಾಲಯದಿಂದ ಶ್ರೀ ರಾಮ ನಾಮ ಜಪಿಸುತ್ತಾ  ಉದ್ಯಾನದವರೆಗೆ ಮೆರವಣಿಗೆ ನಡೆಸಿದರು.

ಬಳಿಕ ಉದ್ಯಾನದಲ್ಲಿ ರಂಗೋಲಿಯಲ್ಲಿ ಅರಳಿದ ಶ್ರೀ ರಾಮನಿಗೆ ಜ್ಯೋತಿ ಬೆಳಗುವ ಮೂಲಕ ಪ್ರಾರ್ಥನೆ ಸಲ್ಲಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದರು. ರಂಗೋಲಿಯಲ್ಲಿ ಮೂಡಿದ್ದ ಶ್ರೀರಾಮನ ಚಿತ್ರದ ಸುತ್ತ ದೀಪಗಳನ್ನು ಇಟ್ಟು ಸಂಭ್ರಮಿಸಿದರು.

‘ಜನವರಿ 22ರಂದು ಮನೆಯಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ಎರಡನೇ ದೀಪಾವಳಿಯಂತೆ ಆಚರಿಸುತ್ತೇವೆ. ಆ ದಿನ ಅಯೋಧ್ಯೆಗೆ ಹೋಗಲು ಆಗದ ಹಿನ್ನೆಲೆಯಲ್ಲಿ ಒಟ್ಟಾಗಿ ಸೇರಿ ರಾಮನಿಗೆ ನಮನ ಸಲ್ಲಿಸಲಿದ್ದೇವೆ’ ಎಂದು  ತಂಡದ ಸದಸ್ಯೆಯರು ತಿಳಿಸಿದರು.

ಇದೇ ವೇಳೆ ಮಕ್ಕಳು ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!