Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಂಗೋಲಿಯಲ್ಲಿ ಅರಳಿದ ಶ್ರೀ ರಾಮನ ಚಿತ್ರ | ಕಣ್ಮನ ಸೆಳೆದ  ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷಧಾರಿ ಮಕ್ಕಳು

---Advertisement---

ಸುದ್ದಿಒನ್, ದಾವಣಗೆರೆ, ಜನವರಿ.21  : ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಉದ್ಯಾನದಲ್ಲಿ 

‘ಸೂಪರ್ ಮಾಮ್ಸ್ ಆಫ್ ದಾವಣಗೆರೆ’ ಮಹಿಳಾ ತಂಡದ ಸದಸ್ಯೆಯರು  ದೀಪ ಬೆಳಗುವ ಮೂಲಕ ‘ಶ್ರೀರಾಮ ದೀಪಾವಳಿ’ ಆಚರಿಸಿದರು.

ಇದಕ್ಕೂ ಮೊದಲು ಸೂಪರ್ ಮಾಮ್ಸ್ ಆಫ್ ದಾವಣಗೆರೆ ವತಿಯಿಂದ ಮಹಿಳೆಯರು ವಿದ್ಯಾನಗರದ ಶಿವ ಪಾರ್ವತಿ ದೇವಾಲಯದಿಂದ ಶ್ರೀ ರಾಮ ನಾಮ ಜಪಿಸುತ್ತಾ  ಉದ್ಯಾನದವರೆಗೆ ಮೆರವಣಿಗೆ ನಡೆಸಿದರು.

ಬಳಿಕ ಉದ್ಯಾನದಲ್ಲಿ ರಂಗೋಲಿಯಲ್ಲಿ ಅರಳಿದ ಶ್ರೀ ರಾಮನಿಗೆ ಜ್ಯೋತಿ ಬೆಳಗುವ ಮೂಲಕ ಪ್ರಾರ್ಥನೆ ಸಲ್ಲಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದರು. ರಂಗೋಲಿಯಲ್ಲಿ ಮೂಡಿದ್ದ ಶ್ರೀರಾಮನ ಚಿತ್ರದ ಸುತ್ತ ದೀಪಗಳನ್ನು ಇಟ್ಟು ಸಂಭ್ರಮಿಸಿದರು.

‘ಜನವರಿ 22ರಂದು ಮನೆಯಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ಎರಡನೇ ದೀಪಾವಳಿಯಂತೆ ಆಚರಿಸುತ್ತೇವೆ. ಆ ದಿನ ಅಯೋಧ್ಯೆಗೆ ಹೋಗಲು ಆಗದ ಹಿನ್ನೆಲೆಯಲ್ಲಿ ಒಟ್ಟಾಗಿ ಸೇರಿ ರಾಮನಿಗೆ ನಮನ ಸಲ್ಲಿಸಲಿದ್ದೇವೆ’ ಎಂದು  ತಂಡದ ಸದಸ್ಯೆಯರು ತಿಳಿಸಿದರು.

ಇದೇ ವೇಳೆ ಮಕ್ಕಳು ಶ್ರೀರಾಮ, ಸೀತೆ ಹಾಗೂ ಹನುಮಂತನ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...