Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ | ಚಿತ್ರದುರ್ಗದ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ

---Advertisement---

 

ಸುದ್ದಿಒನ್, ಚಿತ್ರದುರ್ಗ ಜ. 21: ನಾಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಹಿನ್ನಲೆಯಲ್ಲಿ ನಗರದ ಹಲವು ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯ ನಡೆದವು. ನಾಳೆ ವಿಶೇಷ ಪೂಜೆ, ಭಜನೆ, ದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಯೋಧ್ಯೆಯಲ್ಲಿ ನಾಳೆ (ಜನವರಿ.22) ಸೋಮವಾರದಂದು ನಡೆಯಲಿರುವ ಶ್ರೀ ಬಲರಾಮಚಂದ್ರ ಮೂರ್ತಿಯ ದೇವತಾ ಪ್ರಾಣ ಪ್ರತಿಷ್ಠಾಪನೆ ಹಾಗೂ  ಭವ್ಯವಾದ ನೂತನ ದೇವಾಲಯ ಉದ್ಘಾಟನೆ ಅಂಗವಾಗಿ   ಮೆದೆಹಳ್ಳಿ  ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿಯ ದೇವಾಲಯದಲ್ಲಿ ಬೆಳಿಗ್ಗೆ 7-00 ಗಂಟೆಗೆ ಶ್ರೀ ಆಂಜನೇಯ ಸ್ವಾಮಿ ಶ್ರೀ ಮಹಾ ವಿಷ್ಣು ದೇವತೆಗಳಿಗೆ  ಫಲ ಪಂಚಾಮೃತ ಅಭಿಷೇಕ ವಿಶೇಷ  ಅಲಂಕಾರ  ಅರ್ಚನೆ  ತಾರಕ ಹೋಮ ಹೂವಿನ ಅಲಂಕಾರ ಹಾಗೂ ಮಧ್ಯಾಹ್ನ  ಪ್ರಸಾದದ ವ್ಯವಸ್ಥೆ ಇರುತ್ತದೆ.

ಸಂಜೆ  ಉತ್ತರಾಭಿಮುಖವಾಗಿ ಅಯ್ಯಪ್ಪ ಸ್ವಾಮಿ ಗರ್ಭಗುಡಿ ಹಾಗೂ ಶ್ರೀ ಆಂಜನೇಯ ಸ್ವಾಮಿ ಆವರಣದಲ್ಲಿ ಸಂಜೆ 6-30 ದೀಪಾರಾದನೆಯ ಉದ್ಘಾಟನೆಯನ್ನು ನೆರವೇರುವುದಲ್ಲದೆ  ಈ ಸಂದರ್ಭದಲ್ಲಿ ಸಜ್ಜಿಗೆ ಹಾಗೂ ಪುಳಿಯೋಗರೆ ಪ್ರಸಾದ ವ್ಯವಸ್ಥೆ ಇರುತ್ತದೆ. ಶ್ರೀ ಅಯ್ಯಪ್ಪ ಸ್ವಾಮಿ ಭಕ್ತಾದಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿಯಾದ ಎಂ ಪಿ ವೆಂಕಟೇಶ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನಗರದ ತುರುವನೂರು ರಸ್ತೆಯಲ್ಲಿರುವ ಶ್ರೀ ಪ್ರಸನ್ನ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿತ್ತು.

ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ವಕ್ತಾರರಾದ ಕೆ. ಎಸ್. ನವೀನ್ ಅವರು ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎ ಮುರುಳಿ, ಬಿಜೆಪಿ ಮುಖಂಡರಾದ ಜಿ.ಎಸ್. ಅನಿತ್‍ಕುಮಾರ್, ಸಂಪತ್ ಕುಮಾರ್, ಮಾಧುರಿ ಗಿರೀಶ್, ನವೀನ್ ಚಾಲುಕ್ಯ, ನಾಗರಾಜ್ ಬೇದ್ರೆ, ಮಲ್ಲಿಕಾರ್ಜುನ್, ವೆಂಕಟೇಶ್ ಯಾದವ್, ರತ್ನಮ್ಮ, ಶೈಲಜಾ ರೆಡ್ಡಿ, ಶೀಲಾ, ಯಶ್ವಂತ್, ಕಿರಣ್, ರಾಮು, ಪ್ರಶಾಂತ್, ಚಂದ್ರು ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment