ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಇಂದು ಕೋಟಿ ಕೋಟಿ ಮನಸ್ಸುಗಳು ಬಯಸುತ್ತಿದ್ದ ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಶುಕ್ರವಾರವೇ ರಾಮಲಲ್ಲಾ ಮೂರ್ತಿ ಹೇಗಿದೆ ಎಂಬ ದರ್ಶನವಾಗಿತ್ತು. ಆದರೆ ಇಂದು ದೃಷ್ಟಿ ಇರುವ ರಾಮಲಲ್ಲಾ ವಿಗ್ರಹ, ಅಲಂಕಾರಗೊಂಡ ರಾಮಲಲ್ಲಾನನ್ನು ನೋಡುವುದೇ ಆನಂದ ಪರಮಾನಂದ. ಇಡೀ ಹಿಂದೂಗಳು ಈ ಸಂತಸದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ರಾಮಲಲ್ಲಾ ಮೂರ್ತಿಗೆ ವಿಶೇಷ ಪೂಜೆ ಮಾಡಿದ್ದಾರೆ. ಶಾಸ್ತ್ರ ಸಂಪ್ರದಾಯದ ಮೂಲಕ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಈ ಮೂರ್ತಿಯನ್ನು ಕೆತ್ತಿ, ಇಂದು ದೃಷ್ಟಿ ನೀಡಿದ್ದಾರೆ.
ಅಯೋಧ್ಯೆಯಲ್ಲಿ ಅಲಂಕಾರಗೊಂಡ ರಾಮಲಲ್ಲಾನನ್ನು ಕಂಡು ಅರುಣ್ ಯೋಗಿರಾಜ್ ಸಂತಸಗೊಂಡಿದ್ದಾರೆ. ಸಂಭ್ರಮಪಟ್ಟಿದ್ದಾರೆ. ಈ ಗಳಿಗೆಯ ಬಗ್ಗೆ ಹಂಚಿಕೊಂಡಿರುವ ಅರುಣ್ ಯೋಗಿರಾಜ್, ಈ ಭೂಮಿಯಲ್ಲೇ ನನ್ನಷ್ಟು ಅದೃಷ್ಟವಂತ ಬೇರೆ ಯಾರೂ ಇಲ್ಲ. ನನ್ನ ಪೂರ್ವಜರು ಮತ್ತು ಕುಟುಂಬ ಸದಸ್ಯರ ಆಶೀರ್ವಾದ ನನ್ನ ಮೇಲಿದೆ. ರಾಮಲಲ್ಲಾನ ಆಶೀರ್ವಾದದಿಂದ ಇದೆಲ್ಲಾ ಸಾಧ್ಯವಾಗಿದೆ. ನನಗೆ ಅನ್ನಿಸುತ್ತದೆ ನಾನು ಡ್ರೀಮ್ ಬಾಯ್ ಅಂತ ಸಂತಸ ವ್ಯಕ್ತಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್