Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಣ್ಣ ಸಿನಿಮಾಗೆ ರಶ್ಮಿಕಾ ಬೆಂಬಲ : ನನ್ನ ಜೊತೆಗೆ ಅವರು ಕನ್ನಡದಲ್ಲೇ ಮಾತನಾಡಬೇಕೆಂದ ಚಿಕ್ಕಣ್ಣ

Facebook
Twitter
Telegram
WhatsApp

ಬೆಂಗಳೂರು: ಕಾಮಿಡಿ ಸ್ಟಾರ್ ಆಗಿ ಮಿಂಚಿದ್ದ ನಟ ಚಿಕ್ಕಣ್ಣ, ಈಗ ಫುಲ್ ಟೈಮ್ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ಉಪಾಧ್ಯಕ್ಷ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಇದರ ನಡುವೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಉಪಾಧ್ಯಕ್ಷ ಸಿನಿಮಾಗೆ ಶುಭಾಶಯ ಕೋರಿದ್ದಾರೆ. ಈ ಶುಭಾಶಯದ ವಿಡಿಯೋ ಸಾಕಷ್ಟು ಟಾಕ್ ಕ್ರಿಯೇಟ್ ಮಾಡಿತ್ತು. ಇದೀಗ ಈ ಬಗ್ಗೆ ನಟ ಚಿಕ್ಕಣ್ಣ ಕ್ಲಾರಿಟಿ ಕೊಟ್ಟಿದ್ದಾರೆ.

ಇಂದು ಉಪಾಧ್ಯಕ್ಷ ಸಿನಿಮಾ ಪ್ರಚಾರದಲ್ಲಿದ್ದ ಚಿಕ್ಕಣ್ಣ ಈ ಬಗ್ಗೆ ಮಾತನಾಡಿದ್ದು, ರಶ್ಮಿಕಾ ಮಂದಣ್ಣ ಅವರೊಂದಿಗೆ ನಾನು ಅಂಜನಿಪುತ್ರ, ಪೊಗರು ಸಿನಿಮಾ ಮಾಡಿದ್ದೀನಿ. ನನ್ನ ಸಿನಿಮಾ ಪ್ರಮೋಷನ್ ಗಾಗಿ ಬೈಟ್ ಕೇಳಿದ್ದೆ. ಅದಕ್ಕೆ ಪ್ರೀತಿಯಿಂದ ಅವರು ಕಳುಹಿಸಿದ್ದಾರೆ. ಅಲ್ಲಿಗೆ ನಾನೇ ಬರುತ್ತೀನಿ ಮೇಡಂ. ಒಂದು ಬೈಟ್ ವಿಡಿಯೋ ಮಾಡಿಕೊಳ್ಳುತ್ತೀನಿ ಎಂದೆ. ಅದಕ್ಕೆ ಅವರು ಬರುವುದು ಏನು ಬೇಡ. ನಾನೇ ವಿಡಿಯೋ ಮಾಡಿ ಕಳುಹಿಸುತ್ತೀನಿ ಅಂತ ವಿಡಿಯೋ ಕಳುಹಿಸಿದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇನ್ನು ರಶ್ಮಿಕಾ ಮಂದಣ್ಣ ನನ್ನ ಜೊತೆಗೆ ಕನ್ನಡದಲ್ಲಿಯೇ ಮಾತನಾಡಬೇಕು. ಬೇರೆ ಯಾವ ಆಪ್ಶನ್ ಇಲ್ಲ. ನನಗೆ ಕನ್ನಡ ಬಿಟ್ಟರೆ ಬೇರೆ ಯಾವ ಭಾಷೆಯೂ ಬರುವುದಿಲ್ಲ. ಅವರಿಗೆ ಕ್ಙಡ ಬರದೆ ಹೋದರು ಕನ್ನಡದಲ್ಲಿಯೇ ಮಾತನಾಡಬೇಕು. ಅವರ ಜೊತೆಗೆ ಸಿನಿಮಾ ಮಾಡಿರುವುದರಿಂದ ನನ್ನ ಜೊತೆಗೆ ಅವರು ಕನ್ನಡದಲ್ಲಿಯೇ ಮಾತನಾಡುತ್ತಾರೆ. ನನಗೆ ಕನ್ನಡ ಮಾತ್ರ ಬರುವುದು ಎಂದು ರಶ್ಮಿಕಾ ಮಂದಣ್ಣ ಅವರಿಗೂ ಗೊತ್ತು. ಹೀಗಾಗಿ ಬೇರೆ ಭಾಷೆ ನಾತನಾಡುವುದಿಲ್ಲ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!