Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮೃತಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ |  ಶ್ರೇಷ್ಠ ಭಾರತಕ್ಕಾಗಿ ತಪ್ಪದೆ ಮತದಾನ ಚಲಾಯಿಸೋಣ‌ : ಟಿ.ಪಿ.ಉಮೇಶ್

---Advertisement---

ಸುದ್ದಿಒನ್, ಹೊಳಲ್ಕೆರೆ ಜನವರಿ. 25: ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ. ಮತದಾನವೇ ಶ್ರೇಷ್ಠ ದಾನ. ಪ್ರಜೆಗಳು ಮತದಾನ ಮಾಡಿ ಆಯ್ಕೆ ಮಾಡುವ ಪ್ರತಿನಿಧಿಗಳಿಂದ ಭಾರತದ ಭವಿಷ್ಯ ನಿರ್ಧಾರವಾಗುತ್ತದೆ. ಯೋಗ್ಯ ನಾಯಕರ ಆಯ್ಕೆಗೆ ಮತ್ತು ಶ್ರೇಷ್ಠ ಭಾರತ ನಿರ್ಮಾಣಕ್ಕೆ ತಪ್ಪದೆ ಮತದಾನ ಮೊಡೋಣ ಎಂದು ಅಮೃತಾಪುರ ಮತಗಟ್ಟೆ ಅಧಿಕಾರಿಗಳಾದ ಟಿ.ಪಿ.ಉಮೇಶ್ ಹೇಳಿದರು.

ಹೊಳಲ್ಕೆರೆ ತಾಲ್ಲೂಕಿನ ಅಮೃತಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾಲಕಾಲಕ್ಕೆ ನಡೆಯುವ ಚುನಾವಣೆಗಳಲ್ಲಿ ಅರ್ಹ ಮತದಾರರಿಂದ ಮತದಾನದ ಮೂಲಕ ಸ್ಥಳೀಯ, ರಾಜ್ಯ ಹಾಗು ಕೇಂದ್ರ ಸರ್ಕಾರಗಳು ರಚನೆಗೊಳ್ಳುತ್ತವೆ. ಸರ್ಕಾರಗಳು ಪ್ರಜಾ ಪ್ರತಿನಿಧಿಗಳಿಂದ ನಿಯಂತ್ರಣಕ್ಕೊಳಪಟ್ಟು ದೇಶದ ಎಲ್ಲ ಜನರಿಗೆ ನ್ಯಾಯಸಮ್ಮತವಾದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ನ್ಯಾಯಿಕ ಹಾಗು ರಾಜಕೀಯ ಹಕ್ಕುಗಳ ದೊರಕಿಸಿಕೊಡಲು ಶ್ರಮಿಸುತ್ತದೆ. ಯೋಗ್ಯ, ಪ್ರಾಮಾಣಿಕ, ದೇಶಭಕ್ತ, ಜನಸೇವಾ ಭಾವನೆಯ ನಾಯಕರು ದೇಶದ ಘನತೆ ಗೌರವ ಕಾಪಾಡುತ್ತ ದೇಶವಾಸಿಗಳು ಸುಖಿ ಸಮೃದ್ಧ ಜೀವನಾವಶ್ಯಕತೆಗಳ ಪೂರೈಸಿಕೊಳ್ಳಲು ಹಗಲಿರುಳು ದುಡಿಯುತ್ತಾರೆ. ಚುನಾವಣೆಗಳು ದೇಶದ ಜನರ ಅಸ್ತಿತ್ವ ಮತ್ತು ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿವೆ. ಅರ್ಹ ಮತದಾರರು ತಪ್ಪದೇ ಚುನಾವಣೆ ಮತಪಟ್ಟಿಗೆ ಹೆಸರು ನೋಂದಾಯಿಸಿಕೊಂಡು ಮತ ಚಲಾಯಿಸಬೇಕು. ಭಾರತ ಚುನಾವಣಾ ಆಯೋಗ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು ಅದು ರಚನೆಗೊಂಡು ಇಂದಿಗೆ ಎಪ್ಪತ್ತೈದು ವರ್ಷಗಳಾಗಿದೆ. ಚುನಾವಣಾ ಆಯೋಗದ ರಚನೆ ಸಂಸ್ಮರಣೆಗಾಗಿ ಹಾಗು ಮತದಾನ ಜಾಗೃತಿಗಾಗಿ ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವೆವು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಚುನಾವಣೆ ಗುರುತಿನ ಚೀಟಿ ವಿತರಿಸಲಾಯಿತು. ಎಲ್ಲ ಮತದಾರರಿಗು ಗ್ರಾಮಸ್ಥರಿಗು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಅಮೃತಾಪುರ ಸರ್ಕಲ್ ಗ್ರಾಮ ಆಡಳಿತಾಧಿಕಾರಿ ರಾಜು, ಮುಖ್ಯಶಿಕ್ಷಕ ಡಿ.ಸಿದ್ಧಪ್ಪ, ಸಹಶಿಕ್ಷಕರಾದ ಟಿ.ಪಿ.ಉಮೇಶ್, ಜಿ.ಎನ್.ರೇಷ್ಮಾ ಹಾಗು ಗ್ರಾಮಸ್ಥರಾದ ತಿಮ್ಮಮ್ಮ, ಶಾರದಮ್ಮ, ಸುಮ, ವೆಂಕಟೇಶ್ ಹಾಗು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment