Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಳಿನ್ ಕುಮಾರ್ ಕಟೀಲ್ ಗೆ ಈ ಬಾರಿ ದ.ಕ ಟಿಕೆಟ್ ಕೈತಪ್ಪುತ್ತಾ..? ಅದಕ್ಕಿರುವ ಕಾರಣಗಳೇನು ಗೊತ್ತಾ..?

---Advertisement---

 

ಮಂಗಳೂರು : ದ.ಕ: ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಗೆಲ್ಲುವ ಕುದುರೆ ಯಾರು ಎಂಬ ಲೆಕ್ಕಚಾರವೂ ಹೈಕಮಾಂಡ್ ಅಂಗಳದಲ್ಲಿ ನಡೆಯುತ್ತಿದೆ. ಇತ್ತ ಕ್ಷೇತ್ರಗಳಲ್ಲೂ ಹೊಸಬರು, ಹಳಬರಿಗೆ ಟಿಕೆಟ್ ನಿರೀಕ್ಷೆ ಹೆಚ್ಚಾಗಿದೆ. ಇದರ ನಡುವೆ ದಕ್ಷಿಣ ಕನ್ನಡದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಸಂಘಟನೆಯ ಕಾರ್ಯಕರ್ತರು ಕಟೀಲ್ ಮೇಲೆ ಒಲವು ತೋರುತ್ತಿಲ್ಲ. ಆದರೆ ಬಿ ಎಲ್ ಸಂತೋಷ್ ಅವರು ಮಾತ್ರ ಕಟೀಲು ಅವರ ಬೆಂಬಲಕ್ಕೆ ನಿಂತಿದ್ದಾರೆ.

ಕರಾವಳಿ ಬಿಜೆಪಿಯ ಭದ್ರಕೋಟೆ. ಯಾರೇ ನಿಂತರು ಗೆಲ್ಲುತ್ತಾರೆ ಎಂಬ ವಿಶ್ವಾಸ ಬಿಜೆಪಿಗೆ ಇದೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯ ಬದಲಾವಣೆ ಬಗ್ಗೆ ಚಿಂತಿಸುತ್ತಿದೆ ಎನ್ನಲಾಗುತ್ತಿದೆ. ಈ ಮೂಲಕ ನಳೀನ್ ಕುಮಾರ್ ಅವರ ಹ್ಯಾಟ್ರಿಕ್ ಕನಸಿಗೆ ನೀರೆರೆಚಿದಂತೆ ಆಗಿದೆ‌. ಇನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರ್ ಎಸ್ ಎಸ್ ಹಿನ್ನೆಲೆಯುಳ್ಳ ಚೌಟ ಅವರು ಯಡಿಯೂರಪ್ಪ ಅವರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಸಂಘ ಪರಿವಾರದ ರಾಷ್ಟ್ರೀಯ ಪ್ರಮುಖರೊಂದಿಗೆ ನಿಖಟ ಸಂಪರ್ಕವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿ ಕೂಡ ಆಗಿದ್ದಾರೆ. ನಳೀನ್ ಕುಮಾರ್ ಕಟೀಲು ಅವರಿಗೆ ಸಂಘಟನೆಯವರ ವಿರೋಧ, ಕಾರ್ಯಕರ್ತರ ವಿರೋಧ ಇರುವ ಕಾರಣ ಅದೆಲ್ಲವನ್ನು ವಿರೋಧಿಸಿ ಟಿಕೆಟ್ ನೀಡುವುದು ಅನುಮಾನವಾಗಿದೆ. ಹೀಗಾಗಿ ಲೋಕಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸಬಹುದಾ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment