ಸುದ್ದಿಒನ್, ಚಿತ್ರದುರ್ಗ. ಜ.25: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಎಲ್ಡಿ) ಬ್ಯಾಂಕುಗಳಲ್ಲಿ ರೈತರು ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲದ ಅಸಲು ಪಾವತಿಸಿದರೆ, ಸಂಪೂರ್ಣ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ 31-12-2023 ರವರೆಗಿನ ಸುಸ್ತಿಯಾದ ಕಂತು ಸಾಲಗಳನ್ನು ದಿನಾಂಕ 20-02-2024ರ ಒಳಗಾಗಿ ಪಾವತಿಸಿದರೆ, ಅಂತಹ ರೈತರ ಅಸಲಿನ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು. ಈ ಕುರಿತು ಹತ್ತಿರದ ಪಿ.ಎಲ್.ಡಿ ಬ್ಯಾಂಕುಗಳ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಯೋಜನೆಯ ಸದುಪಯೋಗ ಪಡೆದುಕೊಂಡು ಸಾಲದಿಂದ ಋಣಮುಕ್ತವಾಗುವಂತೆ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಚಿತ್ರದುರ್ಗ ಶಾಖಾ ಕಚೇರಿಯ ಜಿಲ್ಲಾ ನಿರ್ದೇಶಕಿ ಬಿ.ಎನ್.ಶೋಭಾ ಉಮೇಶ್ ಕುಮಾರ್ ರೈತರ ಭಾಂದವರಲ್ಲಿ ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















