Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

---Advertisement---

ಬೆಂಗಳೂರು: ಇಂದು 75ನೇ ಗಣರಾಜ್ಯೋತ್ಸವ ಹಿನ್ನೆಲೆ ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದು, ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲ ರೈತರಿಗೂ ಸಿಹಿ ಸುದ್ದಿ ನೀಡಿದ್ದಾರೆ.

ಬರದಿಂದ ಬಾಧಿತರಾದವರಿಗೆ ರಾಜ್ಯ ಸರ್ಕಾರವೇ ಬೆಳೆ ಪರಿಹಾರವೆಂದು 2000ರೂಪಾಯಿ ವರೆಗೆ ತಾತ್ಕಾಲಿಕ ಪರಿಹಾರವಾಗಿ ಘೋಷಣೆ ಮಾಡಿದೆ. ಈಗಾಗಲೇ 550 ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದ ಒಳಗೆ ಮೊದಲ ಕಂತಿನ ಪರಿಹಾರವಾಗಿ ರೈತರಿಗೆ ತಲುಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಸಂವಿಧಾನದ ಬಗ್ಗೆ ಮಾತನಾಡಿ, ವಿಶ್ವಕ್ಕೆ ಮಾದರಿಯಾದಂತ ಇಂಥಹ ಸಂವಿಧಾನ ಕೊಟ್ಟಂತ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಭಾರತವೂ ತನ್ನನ್ನು ತಾನೂ ಆಳಿಕೊಳ್ಳುವ ಸಂವಿಧಾನ ಬಂದು ಇಂದಿಗೆ 75 ವರ್ಷ ತುಂಬುತ್ತಿವೆ. ಸಂವಿಧಾನವೇ ನಮ್ಮ ಧರ್ಮ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ ಎಂದು ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಬೇಧವಿಲ್ಲದೆ ಸಂಪತ್ತು, ಅವಕಾಶ‌ಮತ್ತು ಅಧಿಕಾರದಲ್ಲಿಸರ್ವರಿಗೂ ಸಮಪಾಲು ಸಿಗಬೇಕೆಂದು ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ. ಸಂವಿಧಾನ ಎಂಬುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮವಿಲ್ಲದ ಜೀವ ಇದ್ದಂತೆ. ಇತ್ತಿಚೆಗೆ ಅಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನು ಪ್ರಜಾಪ್ರಭುತ್ವದ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ಕೂಡ ಧ್ವನಿಗೂಡಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...