Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಹಾಲಿ ಸಂಸದರಿಗೆ ಬಂಡಾಯದ ಬಿಸಿ : ಚಿತ್ರದುರ್ಗದವರಿಗೆ ದಾವಣಗೆರೆ ಟಿಕೆಟ್ ನೀಡದಂತೆ ಬಿಎಸ್ವೈ ಬಳಿ ಮನವಿ

---Advertisement---

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ. ಈ ಹೊತ್ತಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಇದರ ಬೆನ್ನಲ್ಲೇ ದಾವಣಗೆರೆ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್ ಅವರ ವಿರುದ್ಧ ಬಂಡಾಯದ ಧ್ವನಿ ಕೇಳಿಸುತ್ತಿದೆ. ಅವರಿಗೆ ಟಿಕೆಟ್ ನೀಡದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಳಿ ಮನವಿಯನ್ನು ಮಾಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ರೇಣುಕಾಚಾರ್ಯ, ಗುರುಸಿದ್ದನಗೌಡ, ಮಾಡಾಳ್ ಮಲ್ಲಿಕಾರ್ಜುನ ಸೇರಿದಂತೆ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿದ್ದೇಶ್ವರ್ ಅವರಿಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ.

ಸಂಸದ ಜಿ ಎಂ ಸಿದ್ದೇಶ್ವರ ಅವರು ಮೂಲತಃ ಚಿತ್ರದುರ್ಗದವರು. ಅವರಿಗೆ ಅವರಿಗೆ ದಾವಣಗೆರೆ ಕ್ಷೇತ್ರದ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ ನಾಯಕರು ಸರ್ವೇ ಮಾಡಿಸಿ, ಯಾರ ಹೆಸರು ಬರುತ್ತದೋ ಅವರಿಗೆ ಟಿಕೆಟ್ ಕೊಡಿ ಅಂದಿದ್ದಾರೆ. ಇದೆ ವೇಳೆ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಮಾತನಾಡಿ, ದಾವಣಗೆರೆಯಲ್ಲಿ ಚುನಾವಣೆ ಪೂರ್ವ ಪಾರದರ್ಶಕ ಸಮೀಕ್ಷೆ ನಡೆಯಲಿ. ನನಗೆ ಟಿಕೆಟ್ ಕೊಡಿ ಎಂದು ಕೇಳಿಲ್ಲ. ಆದರೆ ಸಮೀಕ್ಷೆ ಮಾಡಿ ಯಾರಿಗಾದರೂ ಕೊಡಲಿ. ಯಡಿಯೂರಪ್ಪ ಅವರ ಬಳಿ ಕಾರ್ಯಕರ್ತರ ಭಾವನೆಯನ್ನು ತಿಳಿಸುತ್ತೇನೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ತಿಳಿಸಿದ್ದಾರೆ. ಯಾರುಗೆ ಕೊಟ್ಟರು ಸಮಾಧಾನ ಆದರೆ ಸಿದ್ದೇಶ್ವರ ಅವರಿಗೆ ನೀಡುವುದು ಬೇಡ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...