Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣತಂತ್ರ ದಿವಸ ಅದ್ಧೂರಿ ಆಚರಿಸದಿರುವುದು ನೋವಿನ ಸಂಗತಿ : ಎಚ್.ಆಂಜನೇಯ

---Advertisement---

ಸುದ್ದಿಒನ್, ಚಿತ್ರದುರ್ಗ, ಜ.26 : ಇಡೀ ದೇಶದ ಸಮಗ್ರ ಅಭಿವರದ್ಧಿಗೆ ಸರ್ವಶ್ರೇಷ್ಠ ಸಂವಿಧಾನ ರಚಿಸಿ 75 ವರ್ಷ ಕಳೆದಿದೆ. ಇಂತಹ ಮಾಹನ್ ದಿನವನ್ನು ಕೇಂದ್ರ ಸರ್ಕಾರ ಅದ್ಧೂರಿಯಾಗಿ ಆಚರಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ ಎಚ್.ಆಂಜನೇಯ ಬೇಸರ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹಾರ್ ಲಾಲ್  ನೆಹರೂರವರು ಭಾರತದ ಮೊದಲನೇ ಕಾನೂನು ಮಂತ್ರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನೇಮಕ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ರವರು ತಮ್ಮ ಜವಬ್ದಾರಿಯನ್ನು ಅರಿತು ವಿವಿಧ ದೇಶಗಳನ್ನು ಸುತ್ತಿ ಅಲ್ಲಿನ  ಕಾನೂನನ್ನು ಅಧ್ಯಯನ ಮಾಡಿ ಸರ್ವರ ಏಳಿಗೆಗೆ ಅವರ ಹಿತಾಸಕ್ತಿಯನ್ನು ಕಾಪಾಡಲಿಕ್ಕೆ ಯಾವ ಕಾನೂನು ಬೇಕು ಎಂಬುದನ್ನು ಅರಿತು ಇಡೀ ವಿಶ್ವವೇ ಮೆಚ್ಚುವಂತ ಒಂದು ಸಂವಿಧಾನವನ್ನು ರಚಿಸಿ, ಅರ್ಪಿಸಿ ಇಂದಿಗೆ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನವನ್ನು ದೇಶದ ಪ್ರಧಾನಿಯವರು ರಾಮ ಮಂದಿರದ ಉದ್ಘಾಟನೆ ಯಾವ ರೀತಿ ಮಾಡಿದರೋ ಅದೇ ರೀತಿ ಅದ್ಧೂರಿಯಾಗಿ ಆಚರಿಸಬೇಕಿತ್ತು. ಅದು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವತಂತ್ರ ಲಭಿಸಲು ಕಾರಣರಾದ ಮತ್ತು ದೇಶವನ್ನು ಅಭಿವೃದ್ಧಿಯತ್ತ ಸಾಗಲು ಕಾರಣರಾದ ಮಹಾತ್ಮಗಾಂಧಿ, ಪಂಡಿತ್ ಜವಹಾರ್ ಲಾಲ್ ನೆಹರು, ಲಾಲ್ ಬಹದೂರ್ ಶಾಸ್ತ್ರಿ, ಇಂದಿರಾಗಾಂಧಿಯವರನ್ನು ನೆನಪೇ ಇಲ್ಲದಂತಹ ಸ್ಥಿತಿ ನಿರ್ಮಾಣ ಮಾಡುತ್ತಿರುವುದು ದುಃಖಕರ ಎಂದರು.

ಬ್ರಿಟೀಷರು 300 ವರ್ಷಗಳ ಕಾಲ ಈ ರಾಷ್ಟ್ರವನ್ನು ಆಳ್ವಿಕೆ ನಡೆಸಿ ನಮ್ಮ ಸಂಪತ್ತನ್ನೆಲ್ಲ ದೋಚಿಕೊಂಡು ಹೋದರು. ಗುಲಾಮಗಿರಿಗೆ ಒಳಪಟ್ಟಿದ್ದ ಜನರನ್ನು ಬಿಡುಗಡೆಗೊಳಿಸಲು ಮಹಾತ್ಮಗಾಂಧಿ ಅವರ ನೇತೃತ್ವದಲ್ಲಿ ಚಳವಳಿ ನಡೆದಿದ್ದರಿಂದ ನಮಗೆ ಸ್ವಾತಂತ್ರಯ ಲಭಿಸಿತು.
ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರು ಅವರು ಪ್ರಧಾನಮಂತ್ರಿ ಆದ ಸಮಯದಲ್ಲಿ ಉಡುವ ಬಟ್ಟೆ ಹರಿದರೆ ಅದನ್ನು ಹೊಲಿಗೆ ಹಾಕಿಸುವ ಯಂತ್ರವೂ ಸೇರಿದಂತೆ ವಿಮಾನ, ಸುಸಜ್ಜಿತ ರಸ್ತೆಯೂ ನಮ್ಮಲ್ಲಿ ಇರಲಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸದೃಢ ಭಾರತದ ನಿರ್ಮಾಣಕ್ಕೆ ನಾಂದಿ ಹಾಡಿದರು ಎಂದು ನೆನಪಿಸಿದರು.

ಸ್ವತಂತ್ರ ಮಾಡುವ ಚಳವಳಿಯಲ್ಲಿ ಬ್ರಿಟೀಷರ ಗುಂಡಿಗೆ ಎದೆಗೊಡುವ ಸಮಯದಲ್ಲಿ ಇವರು ಪರಿಶಿಷ್ಟ ಜಾತಿ, ಪಂಗಡದವರು, ಮುಸ್ಲಿಮರು, ಹಿಂದೂ, ಸಿಖ್ಖರು ಎನ್ನುವುದನ್ನು ನೋಡಲಿಲ್ಲ. ನಮಗೆ ಭಾರತ ಬ್ರಿಟೀಷರ ಸಂಕೋಲೆಯಿಂದ ಮುಕ್ತಿ ಹೊಂದಿ ಸ್ವತಂತ್ರ ಆಗಬೇಕು.ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ತೊಲಗಬೇಕು ಎನ್ನುವ ಸಂಕಲ್ಪದಿಂದ ನಮ್ಮ ಪೂಜ್ಯರ ಹೋರಾಟ ಮತ್ತು ತ್ಯಾಗದ ಫಲವಾಗಿ ಸ್ವತಂತ್ರ ಸಿಕ್ಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾ ಮಾಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಜಿಪಂಮಾಜಿ ಸದಸ್ಯ ಆರ್.ನರಸಿಂಹರಾಜು, ಸಂಪತ್ ಕುಮಾರ್ ಮತ್ತಿತರರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment