ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ನಿನ್ನೆ ಗಣರಾಜ್ಯೋತ್ಸವದ ಸಂಭ್ರಮದ ಕ್ಷಣದಲ್ಲಿ ಮಾಣಿಕ್ ಶಾ ಪರೇಡ್ ಮೈದಾನದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಭದ್ರತೆಯನ್ನು ನೀಡಲಾಗಿತ್ತು. ಆದರೆ ಈ ಭದ್ರತೆಯನ್ನು ದಾಟಿ, ಪರಶುರಾಮ್ ಎಂಬ ವ್ಯಕ್ತಿ ಸಿಎಂ ಬಳಿಗೆ ಬರಲು ಯತ್ನಿಸಿದ್ದರು. ಇದೀಗ ಪರಶುರಾಮ್ ಅವರ ಹಿನ್ನೆಲೆ ತಿಳಿದಿದ್ದು, ಸಿಎಂ ಬಳಿ ಹೋಗಲು ಯತ್ನಿಸಿದ್ದು ಯಾಕೆ ಎಂಬುದು ಗೊತ್ತಾಗಿದೆ.
ಪಾಕ್ಷಿಕ ಪತ್ರಿಕೆಯ ಸಂಪಾದಕನ ಹೆಸರಲ್ಲಿ ಪಾಸ್ ಪಡೆದು, ನಿನ್ನೆ ಮೈಸೂರಿನಿಂದ ಬೆಂಗಳೂರಿಗೆ ಬಂದು, ಕಾರ್ಯಕ್ರಮ ಅಟೆಂಡ್ ಮಾಡಿದ್ದಾರೆ. ಪರಶುರಾಮ್ ಈ ರೀತಿ ಸಿಎಂ ಬಳಿ ನುಗ್ಗಿರುವುದು ಇದೇ ಮೊದಲೇನು ಅಲ್ಲ. 2017ರಲ್ಲೂ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಂದಿನ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಸಮಸ್ಯೆಯ ಕಡೆಗೆ ಗಮನ ಹರಿಸುವಂತೆ ಸೂಚಿಸಿದ್ದರು. ಆಗಲೂ ಸಮಸ್ಯೆ ಬಗೆಹರಿದಿರಲಿಲ್ಲ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲೂ ಪಟಾಕಿ ಸಿಡಿಸಿ ಅವಾಂತರ ಮಾಡಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಈ ರೀತಿಯ ವಿಚಿತ್ರ ನಡವಳಿಕೆಗೆ ಪರಶುರಾಮ್ ಬರೆದಿದ್ದ ಕೆಪಿಎಸ್ಸಿ ಪರೀಕ್ಷೆಯೇ ಕಾತಣವಾಗಿದೆ.
ಪರಶುರಾಮ್ 1993ರಲ್ಲಿಯೇ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದರು. ಆದರೆ ಫಲಿತಾಂಶವನ್ನು ಕಾಯ್ದಿರಿಸಿದೆ. ಫಲಿತಾಂಶಕ್ಕಾಗಿ ಪರಶುರಾಮ್ ಅನೇಕ ಬಾರಿ ಸರ್ಕಸರಿ ಕಚೇರಿಗೆ ಅಲೆದಾಡಿದ್ದಾರೆ. ಆದರೆ ಫಲಿತಾಂಶ ಮಾತ್ರ ಬಂದಿಲ್ಲ. ಹೀಗಾಗಿ ನಿನ್ನೆಯೂ ಅವಾಂತರ ಸೃಷ್ಟಿಸಿದ್ದರು. ತಕ್ಷಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್