Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಎಸ್.ಆರ್.ಎಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ದಾಖಲೆ ಫಲಿತಾಂಶ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.27 : ದಾವಣಗೆರೆ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ ಬಿ.ಇಡಿ., ಕೋರ್ಸ್ ನ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿದ್ದು ಚಿತ್ರದುರ್ಗ ನಗರದ ಎಸ್.ಆರ್.ಎಸ್.ಶಿಕ್ಷಣ ಮಹಾವಿದ್ಯಾಲಯಕ್ಕೆ ದ್ವಿತೀಯ ಸೆಮಿಸ್ಟರ್‍ನಲ್ಲಿ 100% ರಷ್ಟು ಮತ್ತು ನಾಲ್ಕನೇ ಸೆಮಿಸ್ಟರ್‍ನಲ್ಲಿ 100% ರಷ್ಟು ಫಲಿತಾಂಶ ಬಂದಿದೆ.

ದ್ವಿತೀಯ ಸೆಮಿಸ್ಟರ್‍ನಲ್ಲಿ ಒಟ್ಟು ಪರೀಕ್ಷೆಗೆ ಹಾಜರಾದ 97 ಪ್ರಶಿಕ್ಷಣಾರ್ಥಿಗಳಲ್ಲಿ 35 ಪ್ರಶಿಕ್ಷಣಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 62 ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ನಾಲ್ಕನೇ ಸೆಮಿಸ್ಟರ್‍ನಲ್ಲಿ ಒಟ್ಟು ಪರೀಕ್ಷೆಗೆ ಹಾಜರಾದ 63 ಪ್ರಶಿಕ್ಷಣಾರ್ಥಿಗಳಲ್ಲಿ 63 ಪ್ರಶಿಕ್ಷಣಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ದ್ವಿತೀಯ ಸೆಮಿಸ್ಟರ್‍ನಲ್ಲಿ ಚೈತ್ರಾ ಇ (ಸಿ.ಬಿ ವಿಭಾಗ) 600/538 ಅಂಕಗಳೊಂದಿಗೆ ಪ್ರಥಮ ಸ್ಥಾನ (89.66%) ಮತ್ತು ಶಶಿಕಲಾ ಕೆ (ಕೆ ಹೆಚ್ ವಿಭಾಗ) 600/531 ಅಂಕಗಳೊಂದಿಗೆ ದ್ವಿತೀಯ ಸ್ಥಾನ(88.5%) ಮತ್ತು ಅನ್ನಪೂರ್ಣ ವಿ (ಕೆ ಹಚ್ ವಿಭಾಗ) 600/530 ಅಂಕಗಳೊಂದಿಗೆ ತೃತೀಯ ಸ್ಥಾನ (88.33%) ಪಡೆದಿರುತ್ತಾರೆ.

ನಾಲ್ಕನೇ ಸೆಮಿಸ್ಟರ್‍ನಲ್ಲಿ ಅಂಬಿಕಾ.ಆರ್ (ಪಿ.ಎಂ ವಿಭಾಗ) 600/559 ಅಂಕಗಳೊಂದಿಗೆ ಪ್ರಥಮ ಸ್ಥಾನ (93.16%) , ನಾಜೀಯಾ ತಸ್ನೀಮ್ (ಇ.ಸಿ.ವಿಭಾಗ) 600/559 ಅಂಕಗಳೊಂದಿಗೆ ಪ್ರಥಮ ಸ್ಥಾನ (93.16%), ಭವ್ಯಶ್ರೀ.ಎನ್.ಪಿ (ಸಿ.ಬಿ ವಿಭಾಗ) 600/550 ಅಂಕಗಳೊಂದಿಗೆ ದ್ವಿತೀಯ ಸ್ಥಾನ (91.8%), ಸ್ರುಷ್ಠಿ.ಎಸ್ (ಪಿ.ಎಂ.ವಿಭಾಗ) 600/542 ಅಂಕಗಳೊಂದಿಗೆ ತೃತೀಯ ಸ್ಥಾನ (90.5%) ಪಡೆದಿರುತ್ತಾರೆ.

ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದ  ವಿದ್ಯಾರ್ಥಿಗಳಿಗೆ ಎಸ್.ಆರ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ ಹಾಗೂ ಪ್ರಾಚಾರ್ಯರಾದ ಡಾ.ರವಿ.ಟಿ.ಎಸ್. ಉಪಪ್ರಾಂಶುಪಾಲರಾದ ಡಾ.ಬಿ.ಹನುಮಂತಪ್ಪ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹರ್ಷವ್ಯಕ್ತಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!