Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡಿಕೆ ಗಿಡಕ್ಕೆ ಆಕಸ್ಮಿಕ ಬೆಂಕಿ ; 800 ಕ್ಕೂ ಹೆಚ್ಚು ಸುಟ್ಟು ಕರಕಲಾದ ಗಿಡಗಳು

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729,

ಸುದ್ದಿಒನ್, ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ರೈತ ಈರಣ್ಣ ಜಮೀನಿನಲ್ಲಿ ಅಡಿಕೆ ಗಿಡಗಳಿಗೆ ಬೆಂಕಿ ಆಕಸ್ಮಿಕ ಬೆಂಕಿ ಸಂಭವಿಸಿದೆ ಸುಮಾರು 800ಕ್ಕೂ ಹೆಚ್ಚು ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಇದರಿಂದ ರೈತ ಈರಣ್ಣ ಕಂಗಾಲಾಗಿದ್ದು, ರೈತನ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಅಡಿಕೆ ಗಿಡ ಸುಟ್ಟಿದ್ದಲ್ಲದೆ ಗಿಡಗಳಿಗೆ
ನೀರಿನ ಡ್ರೀಪ್ ಪೈಪ್ ಕೂಡ ಸುಟ್ಟು ಕರಕಲಾಗಿದ್ದು ಇದರಿಂದ ರೈತನಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ರೈತ ಈರಣ್ಣ ತನ್ನ ಜಮೀನಿನಲ್ಲಿ 10 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನ ಕೊರಸಿದ್ದರು. ಆದರೆ ಕೊಳವೆ ಬಾವಿಯಲ್ಲಿ ನೀರು ಅಷ್ಟಕಷ್ಟೆ ಬರುತಿತ್ತು. ಆದರೂ ಸಹ ಪಕ್ಕದ ಜಮೀನಿನಲ್ಲಿ ನೀರನ್ನು ಹಾಯಿಸಿಕೊಂಡು ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಇದೀಗ ಅಡಿಕೆ ಗಿಡಗಳಿಗೆ ಬೆಂಕಿ ಬಿದ್ದಿದೆ.

ಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ ಪ್ರತಿಕ್ರಿಯಿಸಿ ಬೆಳಗೆರೆ ಕಾವಲಿನ ಸರ್ವೆ ನಂಬರ 283ರ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿ ಹೆಚ್ಚದಾ ಹಿನ್ನೆಲೆಯಲ್ಲಿ ಬೆಂಕಿ ಜಮೀನಿನ ಗಿಡಗಳಿಗೆ ಆವರಿಸಿಕೊಂಡು ಗಿಡಗಳಿಗೆ ತಾಗಿ ಸುಟ್ಟು ಹೋಗಿದೆ ಎಂದರು. ಇನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!