Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಿಗೆ ಮಂಗನ ಬಾವು ಕಾಯಿಲೆಯ ಕಾಟ: ಪೋಷಕರೇ ಇರಲಿ ಎಚ್ಚರ..!

---Advertisement---

 

ಬೆಂಗಳೂರು: ಫೋಷಕರಿಗೆ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಬದಲಾದ ವಾತಾವರಣದಿಂದಾನೂ ಒಮ್ಮೊಮ್ಮೆ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆರೋಗ್ಯದ ಕಾಳಜಿ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದೀಗ ಸಿಲಿಕಾನ್ ಸಿಟಿಯಲ್ಲಿ ಪೋಷಕರ ಭಯ ಉಂಟು ಮಾಡುವಂತ ಕಾಯಿಲೆಯೊಂದು ಮಕ್ಕಳನ್ನು ಕಾಡುವುದಕ್ಕೆ ಶುರು ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಮಂಗನಬಾವು ಕಾಯಿಲೆಗೆ ಮಕ್ಕಳು ಒಳಗಾಗುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಕೆಲ ಮಕ್ಕಳಿಗೆ ಎಲುಬುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ. ಸರ್ಕಾರದಿಂದ ಸದ್ಯಕ್ಕೆ ಮಕ್ಕಳಿಗೆ MR ಲಸಿಕೆ ಮಾತ್ರ ನೀಡಲಾಗುತ್ತಿದೆ. ಕುತ್ತಿಗೆ ಮೇಲ್ಭಾಗ ಹಾಗೂ ಗದ್ದ, ಕಪಾಳ ಭಾಗವೂ ಊದಿಕೊಳ್ಳುತ್ತಿದೆ. ಮಂಗನ ಬಾವು ಕಾಯಿಲೆ ಮಕ್ಕಳಿಗೆ ಬಹಳ ಬೇಗ ಹರಡುತ್ತಿದೆ. ಈ ನೋವಿನಿಂದಾಗಿ‌ ಮಕ್ಕಳು ಶಾಲೆಗೆ ಹೋಗುವುದಕ್ಕೂ ತೊಂದರೆಯಾಗುತ್ತಿದೆ.

 

ಈ ಮಂಗನ ಬಾವು ಎಂಬ ಕಾಯಿಲೆಯೂ ವೈರಾಣುಗಳಿಂದ ಹರಡುತ್ತದೆ. ಗ್ರಂಥಿಗಳನ್ನು ದೊಡ್ಡದಾಗಿಸುವ ಮೂಲಕ ಮಕ್ಕಳ ದೇಹಕ್ಕೆ ಬಾರೀ ಪ್ರಮಾಣದಲ್ಲಿ ನೋವುಂಟು ಮಾಡುತ್ತದೆ. ಕಿವಿಯ ಮುಂಭಾಗದಲ್ಲಿ ಕೆಳಗಡೆ ಇರುವ ಈ ಗ್ರಂಥಿಗಳು ಜೊಲ್ಲನ್ನು ಉತ್ಪಾದಿಸುತ್ತದೆ. ಇದೊಂದು ಸಾಂಕ್ರಾಮಿಕ ರೊಇಗವೇ ಸರಿ. ಸೋಂಕಿತ ವ್ಯಕ್ತಿಯ ಎಂಜಲು ಸಿಡಿಯುವುದು, ಉಸಿರಾಟ ತಾಗುವುದು ಈ ರೀತಿಯ ಸಂಪರ್ಕದಿಂದಾಗಿ ಬೇರೆ ಮಕ್ಕಳಿಗೂ ಬಹಳ ಬೇಗನೇ ಹರಡುತ್ತದೆ. 2 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ಈ ಕಾಯಿಲೆ ಬಹಳ ಬೇಗನೇ ಹರಡುತ್ತಿದೆ.

ವೈರಸ್ ಮಕ್ಕಳ ದೇಹಕ್ಕೆ ಹರಡಿದ 12-14 ದಿನಗಳ ಒಳಗಾಗಿ ಲಕ್ಷಗಳು ಕಂಡು ಬರುತ್ತವೆ. ಈ ಮಂಗಮ ಬಾವು ವೈರಸ್ ನಿಂದಾಗಿ ಮಕ್ಕಳ ದೇಹ ನೋವಿನಿಂದ ಕೂಡಿರುತ್ತದೆ. ಹೀಗಾಗಿ ಮಕ್ಕಳನ್ನು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment