Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಗೆ ಮಂಗನ ಬಾವು ಕಾಯಿಲೆಯ ಕಾಟ: ಪೋಷಕರೇ ಇರಲಿ ಎಚ್ಚರ..!

Facebook
Twitter
Telegram
WhatsApp

 

ಬೆಂಗಳೂರು: ಫೋಷಕರಿಗೆ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಬದಲಾದ ವಾತಾವರಣದಿಂದಾನೂ ಒಮ್ಮೊಮ್ಮೆ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆರೋಗ್ಯದ ಕಾಳಜಿ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದೀಗ ಸಿಲಿಕಾನ್ ಸಿಟಿಯಲ್ಲಿ ಪೋಷಕರ ಭಯ ಉಂಟು ಮಾಡುವಂತ ಕಾಯಿಲೆಯೊಂದು ಮಕ್ಕಳನ್ನು ಕಾಡುವುದಕ್ಕೆ ಶುರು ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಮಂಗನಬಾವು ಕಾಯಿಲೆಗೆ ಮಕ್ಕಳು ಒಳಗಾಗುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಕೆಲ ಮಕ್ಕಳಿಗೆ ಎಲುಬುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ. ಸರ್ಕಾರದಿಂದ ಸದ್ಯಕ್ಕೆ ಮಕ್ಕಳಿಗೆ MR ಲಸಿಕೆ ಮಾತ್ರ ನೀಡಲಾಗುತ್ತಿದೆ. ಕುತ್ತಿಗೆ ಮೇಲ್ಭಾಗ ಹಾಗೂ ಗದ್ದ, ಕಪಾಳ ಭಾಗವೂ ಊದಿಕೊಳ್ಳುತ್ತಿದೆ. ಮಂಗನ ಬಾವು ಕಾಯಿಲೆ ಮಕ್ಕಳಿಗೆ ಬಹಳ ಬೇಗ ಹರಡುತ್ತಿದೆ. ಈ ನೋವಿನಿಂದಾಗಿ‌ ಮಕ್ಕಳು ಶಾಲೆಗೆ ಹೋಗುವುದಕ್ಕೂ ತೊಂದರೆಯಾಗುತ್ತಿದೆ.

 

ಈ ಮಂಗನ ಬಾವು ಎಂಬ ಕಾಯಿಲೆಯೂ ವೈರಾಣುಗಳಿಂದ ಹರಡುತ್ತದೆ. ಗ್ರಂಥಿಗಳನ್ನು ದೊಡ್ಡದಾಗಿಸುವ ಮೂಲಕ ಮಕ್ಕಳ ದೇಹಕ್ಕೆ ಬಾರೀ ಪ್ರಮಾಣದಲ್ಲಿ ನೋವುಂಟು ಮಾಡುತ್ತದೆ. ಕಿವಿಯ ಮುಂಭಾಗದಲ್ಲಿ ಕೆಳಗಡೆ ಇರುವ ಈ ಗ್ರಂಥಿಗಳು ಜೊಲ್ಲನ್ನು ಉತ್ಪಾದಿಸುತ್ತದೆ. ಇದೊಂದು ಸಾಂಕ್ರಾಮಿಕ ರೊಇಗವೇ ಸರಿ. ಸೋಂಕಿತ ವ್ಯಕ್ತಿಯ ಎಂಜಲು ಸಿಡಿಯುವುದು, ಉಸಿರಾಟ ತಾಗುವುದು ಈ ರೀತಿಯ ಸಂಪರ್ಕದಿಂದಾಗಿ ಬೇರೆ ಮಕ್ಕಳಿಗೂ ಬಹಳ ಬೇಗನೇ ಹರಡುತ್ತದೆ. 2 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ಈ ಕಾಯಿಲೆ ಬಹಳ ಬೇಗನೇ ಹರಡುತ್ತಿದೆ.

ವೈರಸ್ ಮಕ್ಕಳ ದೇಹಕ್ಕೆ ಹರಡಿದ 12-14 ದಿನಗಳ ಒಳಗಾಗಿ ಲಕ್ಷಗಳು ಕಂಡು ಬರುತ್ತವೆ. ಈ ಮಂಗಮ ಬಾವು ವೈರಸ್ ನಿಂದಾಗಿ ಮಕ್ಕಳ ದೇಹ ನೋವಿನಿಂದ ಕೂಡಿರುತ್ತದೆ. ಹೀಗಾಗಿ ಮಕ್ಕಳನ್ನು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!