Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಸ್ಲಿಮರ ಓಲೈಕೆಯಲ್ಲೂ ಸಿಎಂ – ಡಿಸಿಎಂ ಪೈಪೋಟಿ : ಆರ್ ಅಶೋಕ್ ವಾಗ್ದಾಳಿ

---Advertisement---

 

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಿಎಂ ಹಾಗೂ ಡಿಸಿಎಂ ಮೇಲೆ ಹರಿಹಾಯ್ದಿದ್ದಾರೆ. ಮುಸ್ಲಿಮರ ಓಲೈಕೆಯಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಭಾರಿ ಪೈಪೋಟಿ ನಡೆಸುತ್ತಿದ್ದಾರೆ ಎಂದಿದ್ದಾರೆ.

ಮೊನ್ನೆ ತಾನೇ ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರ ಇದೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಮುಸ್ಲಿಮರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಪೈಪೋಟಿ ಬಿದ್ದಂತೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಹಲ್ಲಾ ಅಭಿವೃದ್ಧಿಗೆ 1,000 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ.

ಮೋಹಲ್ಲಾಗಳಿಗೆ 1000 ಕೋಟಿ ರೂಪಾಯಿ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇದೆ. ಆದರೆ ಬರ ಬಂದು ಎಂಟು ತಿಂಗಳಾದರೂ ರೈತರಿಗೆ 2,000 ರೂಪಾಯಿ ಪರಿಹಾರ ನೀಡಲು ಹಣವಿಲ್ಲ. ಸಿಎಂ ಸಿದ್ದರಾಮಯ್ಯ ನವರೇ, ಮುಸ್ಲಿಮರ ತುಷ್ಟೀಕರಣ ಮಾಡಲು ನಿಮ್ಮ ಕಾಂಗ್ರೆಸ್ ಪಕ್ಷ ಯಾವ ಮಟ್ಟಕ್ಕಾದರೂ ಹೋಗುತ್ತದೆ ಎಂದು ಪದೇ ಪದೇ ನಿರೂಪಿಸುತ್ತಲೇ ಇದ್ದೀರಿ. ಆದರೆ ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಅನ್ನ ನೀಡುವ ರೈತರನ್ನೂ ನಿಮ್ಮ ಓಲೈಕೆ ರಾಜಕಾರಣದಲ್ಲಿ ಬಲಿಪಶು ಮಾಡಬೇಡಿ.

ಬರದಿಂದ ಹೈರಾಣಾಗಿ 800ಕ್ಕೂ ಹೆಚ್ಚು ರೈತರು ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಮನೆ ಮಠ ಬಿಟ್ಟು ಗುಳೆ ಹೋಗಿದ್ದಾರೆ. ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರ ಬಲಿಯಾಗಬೇಕು? ಈ ಕೂಡಲೇ ರೈತರ ಖಾತೆಗೆ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಿ. ನಿಮ್ಮ ಕೈಲಾಗಾದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment