Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂವಿಧಾನಕ್ಕೂ ಬಸವಣ್ಣನವರ ವಚನಗಳಿಗೂ ಯಾವುದೇ ವ್ಯತ್ಯಾಸವಿಲ್ಲ : ಸಿ.ಎಸ್.ದ್ವಾರಕನಾಥ್

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.29 : ಬುದ್ಧನ ಮಾನವೀಯತೆ ಬಸವ, ಅಂಬೇಡ್ಕರ್‍ರವರ ಸಮಾನತೆಯಿಂದಾಗಿ ನಾವು ಇಲ್ಲಿದ್ದೇವೆ ಎಂದು ಸಿ.ಎಸ್.ದ್ವಾರಕನಾಥ್ ಹೇಳಿದರು.

ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಎಸ್.ಜೆ.ಎಸ್ ಜ್ಞಾನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ಮೊಟ್ಟ ಮೊದಲಿಗೆ ಸಮಾನತೆ, ಸಹೋದರತೆ, ಸಹಭಾಳ್ವೆಯ ದಾಖಲೆಗಳನ್ನ ಮ್ಯಾಗ್ನಾಕಾಟ್‍ನಿಂದ ನೋಡುತ್ತೇವೆ. ಅದಕ್ಕಿಂತ ಮುಂಚೆಯೇ ಬಸವಾದಿ ಶರಣರು ನಮ್ಮಲ್ಲಿ ಪ್ರತಿಪಾದಿಸಿದ್ದಾರೆ. ಅದನ್ನು ಯಾರು ಮರೆಯಲಿಕ್ಕೆ ಆಗುವುದಿಲ್ಲ. ಈ ರೀತಿ ಸಾಮಾಜಿಕ ನ್ಯಾಯದ ಬಗ್ಗೆ ಮೊಟ್ಟ ಮೊದಲು ಧ್ವನಿ ಎತ್ತಿದ ಬಸವಾದಿ ಶರಣರ ಆದಿಯಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನಡೆಯುತ್ತಿದ್ದಾರೆ ಹಾಗಾಗಿ ಬಹಳ ಸಂತೋಷ ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದ ನಂತರ ಸಿಕ್ಕಿದ್ದು ಸಂವಿಧಾನ, ನಮ್ಮ ಸಂವಿಧಾನಕ್ಕೂ ಬಸವಣ್ಣನವರ ವಚನಗಳಿಗೂ ಯಾವುದೆ ವ್ಯತ್ಯಾಸವಿಲ್ಲ, ನಾನು ಅನೇಕ ಸಲ ಹೇಳುತ್ತಿರುತ್ತೇನೆ, ಸಂವಿಧಾನದ ಪ್ರತಿ ಅನುಚ್ಛೇದಕ್ಕೂ ಬಸವಾದಿ ಶರಣರ ಅನೇಕ ವಚನಗಳನ್ನು ಅಡಿ ಟಿಪ್ಪಣಿಗಳಾಗಿ ಕೊಡಬಹುದು. ನಾವೆಲ್ಲ ಇಂದು ಇಲ್ಲಿ ಕುಳಿತಿದ್ದೇವೆ ಎಂದರೆ ಸಂವಿಧಾನ ಕೊಟ್ಟ ರಕ್ಷಣೆ, ನೀವು ಓದುತ್ತಿದ್ದೀರಿ ಎಂದರೆ ಸಂವಿಧಾನದ ಕೊಡುಗೆ. ನೀವು ಒಳ್ಳೆಯ ಪ್ರಜೆಗಳಾಗಬೇಕು, ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು, ಬುದ್ದ, ಬಸವ, ಅಂಬೇಡ್ಕರ್ ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು ಹಾಗ ಉತ್ತಮ ಪ್ರಜೆಗಳಾಗುತ್ತೀರ ಎಂದು ಹೇಳಿದರು.

ಬಸವ ಪರಂಪರೆಯಲ್ಲಿ ಅನ್ನದಾಸೋಹ, ಅಕ್ಷರ ದಾಸೋಹ ಬಂದಿದೆ. ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ರೀತಿಯ ಪುಣ್ಯ ನಿಮಗೆ ಸಿಕ್ಕಿದೆ. ನಾನು ಕೋಲಾರ ಜಿಲ್ಲೆಯಿಂದ ಬಂದವನು, ಮಠ ಪರಂಪರೆ ಇರಲಿಲ್ಲ, ಎಲ್ಲೋ ಸೇರಿದಿವಿ, ಎಲ್ಲೋ ಓದಿದಿವಿ, ಇಲ್ಲಿಗೆ ಬಂದ ಮೇಲೆ ಅರ್ಥವಾಗಿದ್ದು ಬಸವಾದಿ ಶರಣರು ಹೇಗೆ ಇದ್ದರು, ಎಂತಹ ಕಷ್ಟಪಟ್ಟರು, ಸಾಮಾಜಿಕ ನ್ಯಾಯ ಉಳಿಸಿಕೊಳ್ಳಲಿಕ್ಕೆ ಎಂಬುವುದನ್ನು ಓದಿ, ತಿಳಿಯಲು ಆರಂಭವಾಯಿತು. ನಾನು ಇಲ್ಲಿ ನಿಂತು ಮಾತನ್ನಾಡುತ್ತಿದ್ದೇನೆ ಎಂದರೆ ಬುದ್ಧ, ಬಸವ, ಅಂಬೇಡ್ಕರ್ ಅದರಲ್ಲೂ ಅಂಬೇಡ್ಕರ್ ಕೊಟ್ಟ ಸಂವಿಧಾನ ಅಂತಾ ಹೇಳುತ್ತೇನೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಭೋವಿ ಗುರುಪೀಠದ ಸಿ.ಇ.ಓ ಗೌನಹಳ್ಳಿ ಗೋವಿಂದಪ್ಪ, ಎಸ್.ಜೆ.ಎಸ್ ಸಂಸ್ಥೆಯ ಕಾರ್ಯದರ್ಶಿ ಡಿ.ಸಿ.ಮೋಹನ್, ನಿರ್ದೇಶಕರಾದ ನೇರಲಗುಂಟೆ ರಾಮಪ್ಪ, ಕಾಳಘಟ್ಟ ಹನುಮಂತಪ್ಪ, ಕೆ.ರುದ್ರಪ್ಪ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಆಂಜನೇಯ, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment