Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 30  : ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯವನ್ನು ತುರ್ತಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯವನ್ನು ಇದುವರೆವಿಗೂ ಮಂಜೂರು ಮಾಡಿರುವುದಿಲ್ಲ. ಶೀಘ್ರವೇ ಪರಿಶೀಲಿಸಿ ಬಿಡುಗಡೆಗೊಳಿಸಬೇಕು.

ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಮದುವೆ ಸಹಾಯ ಧನವನ್ನು ಒಂದು ಲಕ್ಷಕ್ಕೆ ಹೆಚ್ಚಿಸಬೇಕು.
ಕಾರ್ಮಿಕ ಮಹಿಳೆ ಹೆರಿಗೆಯಾದ ಆರು ತಿಂಗಳ ಕಾಲ ಮಗುವಿನ ಪೋಷಣೆಯಲ್ಲಿ ತೊಡಗಿರುತ್ತಾಳೆ. ಅಂತಹ ಮಹಿಳೆಗೆ ಪ್ರತ್ಯೇಕವಾಗಿ ಅರವತ್ತು ಸಾವಿರ ರೂ.ಗಳನ್ನು ಮಂಜೂರು ಮಾಡಬೇಕು. ಈ ಹಿಂದಿನ ಆದೇಶದ ಪ್ರತಿಯಲ್ಲಿ ಕೆಲವು ನಿಬಂಧನೆಗಳಿದ್ದು, ತಾಯಿ ಮತ್ತು ಮಗುವಿನ ಹೆಸರಿನಲ್ಲಿರುವ ಬಾಂಡ್ ಹೊರತುಪಡಿಸಿ ಪ್ರತ್ಯೇಕ ಹಣ ನೀಡಬೇಕು.

ನೊಂದಾಯಿತ ಕಟ್ಟಡ ಕಾರ್ಮಿಕ ಅರವತ್ತು ವರ್ಷಗಳನ್ನು ಪೂರೈಸಿದ ನಂತರ ಮೂರು ಸಾವಿರ ರೂ. ಪಿಂಚಣಿ ಪಡೆಯುತ್ತಿರುವುದನ್ನು ಐದು ಸಾವಿರ ರೂ.ಗಳಿಗೆ ಏರಿಸಬೇಕು. ಕಾರ್ಮಿಕನ ಸಹಜ ಸಾವಿಗೆ ಎರಡು ಲಕ್ಷ ರೂ. ಸಹಾಯ ಧನ ಹೆಚ್ಚಿಸಬೇಕು. ಕೆಲಸದ ಸಮಯದಲ್ಲಿ ಅಪಘಾತ ಸಂಭವಿಸಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಹತ್ತು ಲಕ್ಷ ರೂ.ಗಳ ಪರಿಹಾರ ಕೊಡಬೇಕು. ಆರೋಗ್ಯ ಹದಗೆಟ್ಟರೆ ಚಿಕಿತ್ಸೆಗಾಗಿ ಇ.ಎಸ್.ಐ. ಸೌಲಭ್ಯ ಒದಗಿಸಬೇಕು.

ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷ ಅರವತ್ತು ಸಾವಿರಕ್ಕಿಂತ ಹೆಚ್ಚಿನ ಕಾರ್ಮಿಕರು ಮಂಡಳಿಯಲ್ಲಿ ನೊಂದಾಯಿಸಿದ್ದು, ಸರ್ಕಾರ ಜಮೀನು ಖರೀಧಿಸಿ ನಿವೇಶನ ನೀಡಿ ಕಾರ್ಮಿಕರ ಕಾಲೋನಿ ಎಂದು ಹೆಸರಿಡಬೇಕೆಂದು ಪ್ರತಿಭಟನಾನಿರತ ಕಾರ್ಮಿಕರು ಒತ್ತಾಯಿಸಿದರು.
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಜಾವಿದ್ ಪಾಷ, ಗೌರವಾಧ್ಯಕ್ಷ ಹೆಚ್.ಹಾಲೇಶಪ್ಪ, ಮಹಿಳಾ ಪ್ರಧಾನ ಕಾರ್ಯದರ್ಶಿ ಪಿ.ಲಕ್ಷ್ಮಿದೇವಿ, ಟಿ.ಬಸವರಾಜ್, ಅಂಜಿನಪ್ಪ, ತಿಪ್ಪೇಸ್ವಾಮಿ, ಮನ್ಸೂರ್‍ಭಾಷ, ಎಂ.ರಾಜಣ್ಣ, ಎಂ.ಮಲ್ಲಿಕಾರ್ಜುನ, ಸನಾವುಲ್ಲಾ, ಅಶೋಕ್, ಹಚ್.ರಮೇಶ್, ರಾಜು ಪಿ. ನಾಗೇಶ್, ಈರೇಶ್, ಡಿ.ಲಕ್ಷ್ಮಣ, ಎಂ.ಸುರೇಶ್, ಜೆ.ಎಂ.ರಾಜು, ಅಂಜಿನಪ್ಪ, ಓಂಕಾರಪ್ಪ, ನಾಗಭೂಷಣ್, ಜಗದೀಶ್, ಶಿವಮೂರ್ತಿ, ಚಳ್ಳಕೇರಪ್ಪ, ಹನುಮಂತಪ್ಪ, ಎಂ.ತಿಪ್ಪೇಸ್ವಾಮಿ, ಹೆಚ್.ಸುರೇಶ, ಮೈಲಾರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment