Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲೋಕಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಗೆ ವಚನಾನಂದ ಸ್ವಾಮೀಜಿ ಬೇಡಿಕೆ..!

---Advertisement---

 

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಹೊತ್ತಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರ ಜೊತೆಗೆ ಸಮುದಾಯಗಳಿಂದಾನೂ ಬೇಡಿಕೆ ಬರುತ್ತಿದೆ. ಇದೀಗ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಗಳನ್ನು ನೀಡಬೇಕೆಂದು ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಕ್ಕೂ ವಚನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

 

ಪಂಚಮಸಾಲಿ ಸಮುದಾಯಕ್ಕೆ ಲೋಕಸಭೆಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕೆಂದಿದ್ದಾರೆ. ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ನಮ್ಮವರೆ ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಸುಮಾರು 80 ಲಕ್ಷಕ್ಕೂ ಹೆಚ್ಚು ಸಮುದಾಯವಿದೆ. ಇತ್ತೀಚಿನ ದಿನಗಳಲ್ಲಿ ನಮ್ಮವರಿಗೆ ರಾಜಕೀಯವಾಗಿ ಮಾನ್ಯತೆ ಸಿಕ್ಕಿಲ್ಲ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮವರಿಗೆ ಮಾನ್ಯತೆ ಸಿಗಬೇಕು ಎಂದಿದ್ದಾರೆ.

 

ಈ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕು. ಯಾವ ಕ್ಷೇತ್ರಕ್ಕೆ ಕೊಡುತ್ತಾರೋ..? ಯಾವ ವ್ಯಕ್ತಿಗೆ ಕೊಡುತ್ತಾರೋ ಅದು ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷಕ್ಕೆ ನಿಷ್ಠೆಯಿಂದ ಇದ್ದವರಿಗೆ ಮತ್ತು ಯೋಗ್ಯವಾಗಿದ್ದವರಿಗೆ ಟಿಕೆಟ್ ನೀಡಲಿ. ನಮ್ಮ ಸೋದರ ಸಮುದಾಯದ ಸಂಖ್ಯೆ ಕಡಿಮೆ ಇದ್ದರು ಹೆಚ್ಚಿನ ಪಾಲನ್ನು ಪಡೆಯುತ್ತಿದ್ದಾರೆ. ನಮ್ಮ ಸಮುದಾಯ ಕೇವಲ ಮತಕ್ಕೆ ಮಾತ್ರ ಸೀಮಿತವಾದಂತೆ ಇದೆ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮವರಿಗೆ ಟಿಕೆಟ್ ಸಿಗಬೇಕು. ಕೂಡಲ ಸಂಗಮ ಭಕ್ತರಿಗೆ ಕೊಟ್ಟರು ಓಕೆ. ನಾವೂ ಬೆಂಬಲ ನೀಡುತ್ತೇವೆ. ಎರಡು ಪಕ್ಷಗಳು ನಮ್ಮ ಸಮಾಜದವರಿಗೆ ನೀಡದರೆ ನಾವೇ ಹೊಂದಾಣಿಕೆ ಮಾಡಿಕೊಂಡು ಆ ವ್ಯಕ್ತಿಯನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...