Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಗೆ ವಚನಾನಂದ ಸ್ವಾಮೀಜಿ ಬೇಡಿಕೆ..!

Facebook
Twitter
Telegram
WhatsApp

 

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಹೊತ್ತಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರ ಜೊತೆಗೆ ಸಮುದಾಯಗಳಿಂದಾನೂ ಬೇಡಿಕೆ ಬರುತ್ತಿದೆ. ಇದೀಗ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಗಳನ್ನು ನೀಡಬೇಕೆಂದು ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಕ್ಕೂ ವಚನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

 

ಪಂಚಮಸಾಲಿ ಸಮುದಾಯಕ್ಕೆ ಲೋಕಸಭೆಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕೆಂದಿದ್ದಾರೆ. ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ನಮ್ಮವರೆ ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಸುಮಾರು 80 ಲಕ್ಷಕ್ಕೂ ಹೆಚ್ಚು ಸಮುದಾಯವಿದೆ. ಇತ್ತೀಚಿನ ದಿನಗಳಲ್ಲಿ ನಮ್ಮವರಿಗೆ ರಾಜಕೀಯವಾಗಿ ಮಾನ್ಯತೆ ಸಿಕ್ಕಿಲ್ಲ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮವರಿಗೆ ಮಾನ್ಯತೆ ಸಿಗಬೇಕು ಎಂದಿದ್ದಾರೆ.

 

ಈ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕು. ಯಾವ ಕ್ಷೇತ್ರಕ್ಕೆ ಕೊಡುತ್ತಾರೋ..? ಯಾವ ವ್ಯಕ್ತಿಗೆ ಕೊಡುತ್ತಾರೋ ಅದು ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷಕ್ಕೆ ನಿಷ್ಠೆಯಿಂದ ಇದ್ದವರಿಗೆ ಮತ್ತು ಯೋಗ್ಯವಾಗಿದ್ದವರಿಗೆ ಟಿಕೆಟ್ ನೀಡಲಿ. ನಮ್ಮ ಸೋದರ ಸಮುದಾಯದ ಸಂಖ್ಯೆ ಕಡಿಮೆ ಇದ್ದರು ಹೆಚ್ಚಿನ ಪಾಲನ್ನು ಪಡೆಯುತ್ತಿದ್ದಾರೆ. ನಮ್ಮ ಸಮುದಾಯ ಕೇವಲ ಮತಕ್ಕೆ ಮಾತ್ರ ಸೀಮಿತವಾದಂತೆ ಇದೆ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮವರಿಗೆ ಟಿಕೆಟ್ ಸಿಗಬೇಕು. ಕೂಡಲ ಸಂಗಮ ಭಕ್ತರಿಗೆ ಕೊಟ್ಟರು ಓಕೆ. ನಾವೂ ಬೆಂಬಲ ನೀಡುತ್ತೇವೆ. ಎರಡು ಪಕ್ಷಗಳು ನಮ್ಮ ಸಮಾಜದವರಿಗೆ ನೀಡದರೆ ನಾವೇ ಹೊಂದಾಣಿಕೆ ಮಾಡಿಕೊಂಡು ಆ ವ್ಯಕ್ತಿಯನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

error: Content is protected !!