Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ | ಚಿತ್ರದುರ್ಗದಲ್ಲಿ ಫೆಬ್ರವರಿ 05 ರಂದು ನೇರ ನೇಮಕಾತಿ ಸಂದರ್ಶನ

Facebook
Twitter
Telegram
WhatsApp

 

ಚಿತ್ರದುರ್ಗ. ಫೆ.01: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಫೆ.5ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಐಸಿಐಸಿಐ ಬ್ಯಾಂಕ್ (ಟಿವಿಎಸ್ ಟ್ರೈನಿಂಗ್ ಸರ್ವೀಸಸ್) ಮತ್ತು ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ನಲ್ಲಿ ಖಾಲಿ ಇರುವ ರಿಲೇಶಿಯನ್‍ಶಿಪ್ ಮ್ಯಾನೇಜರ್ ಮತ್ತು ಟ್ರೈನೀ ಕೇಂದ್ರ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಈ ಕಂಪನಿಗಳಿಗೆ ಕಾರ್ಯನಿರ್ವಹಿಸಲು 18 ರಿಂದ 28 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿದೆ.

ಐಸಿಐಸಿಐ ಬ್ಯಾಂಕ್ (ಟಿವಿಎಸ್ ಟ್ರೈನಿಂಗ್ ಸರ್ವೀಸಸ್)ನಲ್ಲಿ ರಿಲೇಶಿಯನ್‍ಶಿಪ್ ಮ್ಯಾನೇಜರ್‍ನ 80 ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ (ಬಿ.ಇ, ಬಿ.ಟೆಕ್ ಮತ್ತು ಎಂಬಿಎ ಅನ್ವಯಿಸುವುದಿಲ್ಲ) ಹೊಂದಿರಬೇಕು. ಪ್ರತಿ ಮಾಹೆ 21 ಸಾವಿರ ವೇತನ ನೀಡಲಾಗುವುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಿದೆ. ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ನಲ್ಲಿ ಟ್ರೈನೀ ಕೇಂದ್ರ ಮ್ಯಾನೇಜರ್‍ನ 40 ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಐಟಿಐ, ಯಾವುದೇ ಪದವಿ ಹೊಂದಿರಬೇಕು. ಮಾಸಿಕ ವೇತನ 13 ಸಾವಿರ ನೀಡಲಾಗುವುದು. ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಾತ್ರ ಕೆಲಸ ನಿರ್ವಹಿಸಬೇಕಿದೆ.

ಆಸಕ್ತರು ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಪೋಟೋ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!