Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶ ಒಡೆಯುವ ಕೆಲಸದ ಬಗ್ಗೆ ಯಾರೇ ಮಾತನಾಡಿದರು ಸಹಿಸಲ್ಲ : ಡಿಕೆ ಸುರೇಶ್ ಹೇಳಿಕೆಗೆ ಖರ್ಗೆ ಗರಂ

Facebook
Twitter
Telegram
WhatsApp

 

 

ನವದೆಹಲಿ: ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರು, ಅದನ್ನು ಸಹಿಸುವುದಿಲ್ಲ. ಅದು ಪಕ್ಷದವರೇ ಆಗಲಿ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಗ್ ಎಚ್ಚರಿಕೆ ನೀಡಿದ್ದಾರೆ. ದೇಶ ವಿಭಜನೆ ಮಾಡುವ ಹೇಳಿಕೆ ಯಾರೇ ನೀಡದರು ಸಹಿಸುವುದಿಲ್ಲ ಎಂದಿದ್ದಾರೆ.

ಸಂಸದ ಡಿಕೆ ಸುರೇಶ್ ಅವರು, ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಹೊಸತೇನು ಕೊಟ್ಟಿಲ್ಲ. ಕೇಂದ್ರ ಸರ್ಕಾರವೂ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವೂ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು.

ಈ ವಿಚಾರ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕದ ಬಿಜೆಪಿ ನಾಯಕರು ಡಿಕೆ ಸುರೇಶ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ‌. ದೇಶ ವಿಭಜನೆ ಬಗ್ಗೆ ಮಾತನಾಡಿ, ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ, ದೇಶ ವುಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್ ನ ಪ್ರಯತ್ನ ಇನ್ನೂ ಮುಂದುವರೆದಿದೆ. ಡಿಕೆ ಸುರೇಶ್ ಅವರ ಇದಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಕಾದ್ ಜೋಶಿ ಆಗ್ರಹ ಮಾಡಿದ್ದಾರೆ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!