Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್ ಕೆ ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ

Facebook
Twitter
Telegram
WhatsApp

ನವದೆಹಲಿ: ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಪ್ರಧಾನಿ ಮೋದಿಯವರು ತಮ್ಮ ಟ್ವಿಟ್ಟರ್ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಶ್ರೀ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬುದರ ವಿಚಾರ ಹಂಚಿಕೊಳ್ಳುವುದಕ್ಕೇನೆ ನನಗೆ ತುಂಬಾ ಸಂತೋಷವಾಗಿದೆ. ಈ ಗೌರವಕ್ಕೆ ಪಾತ್ರವಾಗಿದ್ದಕ್ಕೆ ಅವರ ಬಳಿ ಮಾತನಾಡಿ, ಅಭಿನಂದನೆ ಸಲ್ಲಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು‌. ಭಾರತದ ಅಭಿವೃದ್ಧಿಗೆ ಅವೆ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪ ಪ್ರಧಾನಿಯಾಗಿ ದೇಶಸೇವೆ ಮಾಡುವವರೆಗೆ ಶ್ರಮಿಸಿದ್ದಾರೆಮ ಅವರ ರಾಜಕೀಯ ಜೀವನ ಸದಾ ಆದರ್ಶಪ್ರಾಯವಾಗಿದೆ ಎಂದಿದ್ದಾರೆ.

 

ಲಾಲ್ ಕೃಷ್ಣ ಅಡ್ವಾಣಿಯವರು ಎಲ್ ಕೆ ಅಡ್ವಾಣಿ ಎಂದೇ ಖ್ಯಾತಿ ಪಡೆದವರು. ಬಿಜೆಪಿ ಪಕ್ಷದ ಸಹ ಸಂಸ್ಥಾಪಕರಲ್ಲಿ ಇವರು ಕೂಡ ಒಬ್ಬರು. ಆರ್ ಎಸ್ ಎಸ್ ನ ಸದಸ್ಯರು ಕೂಡ ಆಗಿದ್ದಾರೆ. 90ರ ದಶಕದಲ್ಲಿ ರಾಮಮಂದಿರಕ್ಕಾಗಿ ಹೋರಾಟ ಮಾಡಿದ ಧೀಮಂತ ನಾಯಕರು ಅವರು. 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಇಂಥ ಧೀಮಂತ ನಾಯಕನಿಗೆ ಇದೀಗ ಭಾರತ ರತ್ನ ಪ್ರಶಸ್ತಿ ಲಭಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!