Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘ ಒತ್ತಾಯ….!

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಫೆಬ್ರವರಿ.03  : 7ನೇ ವೇತನ ಆಯೋಗದ ವರದಿಯನ್ನು ಶೀಘ್ರ ಯಾಥಾವತ್ತಾಗಿ ಅನುಷ್ಠಾನಗೊಳಿಸಿ ಹಾಗೂ ಎನ್‌ಪಿಎಸ್ ಬದಲು ಓಪಿಎಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಎನ್‌ಪಿಎಸ್ ಯೋಜನೆಯು ಸರ್ಕಾರಿ ನೌಕರರಿಗೆ ಮರಣ ಶಾಸನವಾಗಿದ್ದು ಇದನ್ನು ಕೂಡಲೇ ರದ್ದುಗೊಳಿಸಿ ಓಪಿಎಸ್ ಯೋಜನೆಯನ್ನು ಮರು ಜಾರಿ ಮಾಡಬೇಕು, ಜೊತೆಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಇದಲ್ಲದೆ ನೌಕರರ ಇತರೇ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ಆಗ್ರಹಿಸಿದರು.

ನೌಕರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರಾಜ್ಯ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವ ಡಿ ಸುಧಾಕರ್ ಅವರು ಭರವಸೆ ನೀಡಿದರು.


ಆರ್. ಶಿವಕುಮಾರ್, ತಾಲ್ಲೂಕು ಅಧ್ಯಕ್ಷ

7ನೇ ವೇತನ ಆಯೋಗದ ವರದಿಯ ಅವಧಿ ಹೆಚ್ಚುತ್ತಾ ಹೋಗುತ್ತಿದೆ. ಇದರಿಂದ ಸರ್ಕಾರಿ ನೌಕರರ ಬೇಡಿಕೆಗಳಿಗೆ ಬೆಲೆ ಇಲ್ಲದಂತಾಗಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಕೂಡಲೇ ಸರ್ಕಾರ ಶೀಘ್ರವಾಗಿ ವರದಿ ಪಡೆದುಕೊಂಡು ಎನ್‌ಪಿಎಸ್ ಬದಲಿಗೆ ಓಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರ ಕನಸು ನನಸು ಮಾಡಲು ಮುಂದಾಗಬೇಕೆಂದು ಸರ್ಕಾರವನ್ನು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಶಿವಕುಮಾರ್
ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ನೌಕರರ ಸಂಘದ ಖಜಾಂಚಿ ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಬಿ. ರಮೇಶ್, ರಾಜ್ಯ ಪರಿಷತ್ ಸದಸ್ಯೆ ಎಚ್ ಎಂ. ಯಶೋಧ,  ಸೋಮಶೇಖರ್, ಜಿಎಸ್ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಅಧ್ಯಕ್ಷ ನಾಗನಾಯ್ಕ, ತಿಪ್ಪೇಸ್ವಾಮಿ, ವಿದ್ಯಾಧರ, ಕೆಂಪಣ್ಣ, ಅಶೋಕ್, ರಂಗಸ್ವಾಮಿ, ಲೋಕಮ್ಮ, ರಮೇಶ್ ನಾಯ್ಕ, ವಿನಯ್ ಕುಮಾರ್, ರವಿಕುಮಾರ್, ರಂಗಸ್ವಾಮಿ, ಮಂಜುನಾಥ್, ರಮೇಶ್, ಪ್ರೇಮಲತಾ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುರುಘಾಮಠದಲ್ಲಿ ಬಸವೇಶ್ವರರ ಜಯಂತ್ಯೋತ್ಸವ ಆಚರಣೆ | ಪ್ರತಿಯೊಬ್ಬರ ಮನೆಯಲ್ಲಿ ಬಸವಧರ್ಮ ಗ್ರಂಥ ಇರಬೇಕು : ಶ್ರೀ ಬಸವನವಲಿಂಗ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಮೇ. 10 : ಬಸವಾದಿ ಪ್ರಮಥರು ಜೀವನೋದ್ಧಾರಕ್ಕಾಗಿ ಕಾಯಕ, ಆತ್ಮೋದ್ಧಾರಕ್ಕಾಗಿ ಶಿವಯೋಗ, ಜೀವನ್ಮುಕ್ತಿಗಾಗಿ ದಾಸೋಹವನ್ನು ಮಾಡಿದರು ಎಂದು ಶಿವಮೊಗ್ಗ ಪ್ರಭುದೇವ ಜ್ಞಾನಕೇಂದ್ರದ ಶ್ರೀ ಬಸವನವಲಿಂಗ ಶರಣರು ನುಡಿದರು. ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

error: Content is protected !!