Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ವಿದ್ಯಾರ್ಥಿಗಳಿಂದ 50 ರೂ. ವಸೂಲಿಗೆ ಹೆಚ್ಡಿಕೆ ಕಿಡಿ: ಬಿಜೆಪಿಯೇ ತಂದ ಆದೇಶವಾ..? ಇಲಾಖೆ ಹೇಳಿದ್ದೇನು..?

---Advertisement---

 

 

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಮೇಲೆ ಆಕ್ರೋಶ ಹೊರ ಹಾಕಿದ್ದರು. ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಪ್ರತಿಯೊಬ್ಬ ವಿದ್ಯಾರ್ಥಿಯಿಂದ 50 ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಇದೀಗ ಶಿಕ್ಷಣ ಇಲಾಖೆ ಅದಕ್ಕೆ ಸ್ಪಷ್ಟನೆ ನೀಡಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳಿಂದ ಹಣ ಸಂಗ್ರಹ ಮಾಡುವುದಕ್ಕೆ 2023ರ ಫೆಬ್ರವರಿಯಲ್ಲಿ ಸರ್ಕಾರವೇ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪಾಲಿಸುತ್ತಿದ್ದೀವಿ. ಕಳೆದ 4 ವರ್ಷಗಳಿಂದ ಈ ಶುಲ್ಕ ಇದೆ. ಪರೀಕ್ಷಾ ಖರ್ಚು ಭರಿಸಲು ಈ ಶುಲ್ಕ ವಸೂಲಿ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರವಿದ್ದಾಗಲೇ ಈ ರೀತಿಯ ಆದೇಶ ಬಂದಿದೆ ಎಂದು ತಿಳಿಸಿದ್ದಾರೆ‌.

 

ಇದೇ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, 50 ರೂಪಾಯಿ ತೆಗೆದುಕೊಳ್ಳುವ ನಿಯಮ ಮಾಡಿದ್ದು ಬಿಜೆಪಿಯವರೇ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ್ದು. ಹೆಚ್.ಡಿ.ಕುಮಾರಸ್ವಾಮಿ ಮೊದಲು ಬಿಜೆಪಿಯವರನ್ನು ಪ್ರಶ್ನೆ ಮಾಡಲಿ 2 ಸಾವಿರ ರೂ. ಜೆಡಿಎಸ್​​, ಬಿಜೆಪಿಯವರೇ ಪಡೆಯುತ್ತಿದ್ದಾರೆ ಅಲ್ವಾ. ಬಿಜೆಪಿ, ಜೆಡಿಎಸ್​ನವರಿಗೆ ಜಾಸ್ತಿ ಗ್ಯಾರಂಟಿ ಹೋಗ್ತಿರೋದು. ಅದರ ಬಗ್ಗೆ ಚರ್ಚೆ ಮಾಡಲು ಹೆಚ್​.ಡಿ.ಕುಮಾರಸ್ವಾಮಿಗೆ ಕೇಳುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...