Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದು ಆಮೆ ನಡಿಗೆಯ ಸರ್ಕಾರವೂ ಅಲ್ಲ : ವಿಜಯೇಂದ್ರ ಕಿಡಿ

---Advertisement---

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗರಂ ಆಗಿದ್ದಾರೆ. ಬಾಕಿ ಉಳಿದಿರುವ ಕಡತಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮೆ ನಡಿಗೆಯ ಸರ್ಕಾರವೂ ಅಲ್ಲ ನಿಂತ ನೀರಿನ ಸರ್ಕಾರ ಎಂದಿದ್ದಾರೆ.

 

ಇದು ಆಮೆ ನಡಿಗೆಯ ಸರ್ಕಾರವೂ ಅಲ್ಲ, ನಿಂತ ನೀರಿನ ಸರ್ಕಾರ ಎಂಬುದನ್ನು ಕುಂತಲ್ಲೇ ಕೂತು ಧೂಳು ತಿನ್ನುತ್ತಿರುವ, 1.37 ಲಕ್ಷ ಕಡತಗಳು ಸಾಕ್ಷಿ ನುಡಿಯುತ್ತಿವೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯ ಹಾದಿಯಲ್ಲಿ ಹೆಜ್ಜೆ ಇಡುವ ಮಾತು ಹಾಗಿರಲಿ ಜನರ ಕಷ್ಟ, ನಿವೇದನೆಗಳಿಗೆ ನಿತ್ಯ ಸ್ಪಂದಿಸಬೇಕಿದ್ದ ಕಡತಗಳೂ
ಚಲನ ಶೀಲತೆ ಕಳೆದು ಕೊಂಡಿವೆ ಎಂದರೆ ಈ ಸರ್ಕಾರ ಸ್ವಾಧೀನ ಕಳೆದು ಕೊಂಡಿದೆ ಎಂದೇ ಅರ್ಥೈಸಬೇಕಾಗಿದೆ.

 

ಸರ್ಕಾರದ ಮಂತ್ರಿಗಳು ಜವಾಬ್ದಾರಿ ಮರೆತರೆ ಅಧಿಕಾರಿಗಳು ನಿಷ್ಕ್ರೀಯ ರಾಗುತ್ತಾರೆ ಆಗ ಆಡಳಿತ ಯಂತ್ರವೂ ನಿಯಂತ್ರಣ ಕಳೆದು ಕೊಳ್ಳುತ್ತದೆ,ಇದರ ಪರಿಣಾಮದ ಬಿಸಿ ಅನುಭವಿಸುವವರು ಜನರು ಮಾತ್ರ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಸರ್ಕಾರ ಎಚ್ಚೆತ್ತು ಕೊಳ್ಳಲಿ ಜಡ್ಡುಗಟ್ಟಿರುವ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲಿ, ಈ ನಿಟ್ಟಿನಲ್ಲಿ ಈಗಷ್ಟೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿಗಳು ಸರ್ಕಾರವನ್ನು ನಿದ್ದೆಯಿಂದ ಎಬ್ಬಿಸಲು ಹೊರಟಿದ್ದಾರೆ ಎಂದು ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment