Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ : ಹಲವು ಬೇಡಿಕೆಗಳನ್ನಿಟ್ಟು ರೈತರ ಪ್ರತಿಭಟನೆ

---Advertisement---

 

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಂದು ಸಿಲಿಕಾನ್ ಸಿಟಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದೆ. ಕರ್ನಾಟಕ ರೈತ ಸಂಘಟನೆಯ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಈ ಪ್ರತಿಭಟನೆ ನಡೆಯುತ್ತಿದೆ‌. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಪತ್ರ ಸಲ್ಲಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಐದು ಸಾವಿರಕ್ಕೂ ಅಧಿಕ ರೈತರು ಭಾಗಿಯಾಗಲಿದ್ದಾರೆ.

ಅಷ್ಟಕ್ಕೂ ಸರ್ಕಾರದ ಮುಂದೆ ರೈತರು ಇಡುತ್ತಿರುವ ಬೇಡಿಕೆಗಳೇನು ಎಂಬುದನ್ನು ನೋಡುವುದಾದರೆ, ತೆಲಂಗಾಣದಂತೆ ರಾಜ್ಯದಲ್ಲಿ ಸರ್ಕಾರ ರೈತರ ಸಾಲ‌ ಮನ್ನಾ ಮಾಡಬೇಕು. ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡುವ ಯೋಜನೆ ಜಾರಿ ಮಾಡಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸಿ, ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚೆನಯಾಗಿದೆ. ಆ ರೈತರಿಗೆ ಸರ್ಕಾರದಿಂದ ಎಕರೆಗೆ ಕನಿಷ್ಠ 25 ಸಾವಿರ ಹಣ ನೀಡಬೇಕಾಗಿದೆ.

ಕಬ್ಬು ಕಟಾವು ಸಾಗಾಣಿಕೆ ದರವನ್ನು ಕಾರ್ಖಾನೆಗಳು ಮನಬಂದಂತೆ ಕಡಿಮೆ ಮಾಡಿದ್ದಾರೆ. ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಾಸ್ ಕೊಡಿಸಬೇಕು. ಟನ್ ಕಬ್ಬಿಗೆ 150 ರೂಪಾಯಿ ಹೆಚ್ಚುವರಿ ದರ ಕಾರ್ಖಾನೆಗಳು ರೈತರಿಗೆ ನೀಡಬೇಕು. ಇಲ್ಲವಾದಲ್ಲಿ ಸರ್ಕಾರವೇ ರೈತರಿಗೆ ಹೆಚ್ಚಿನ ಹಣ ನೀಡಬೇಕು. ರೈತರು ಬೆಳೆದ ಸಿರಿಧಾನ್ಯಗಳ ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ, ಹೆಚ್ಚುವರಿ ಬೆಲೆಯನ್ನು ನಿಗದಿ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment