Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪಿ.ಟಿ.ಸಿ.ಎಲ್. ಕಾಯಿದೆ ತಿದ್ದುಪಡಿ : ಅಧಿಕಾರಿಗಳ ವಿಳಂಬ ಧೋರಣೆ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06 : ರಾಜ್ಯ ಸಚಿವ ಸಂಪುಟದಲ್ಲಿ ಪಿ.ಟಿ.ಸಿ.ಎಲ್. ಕಾಯಿದೆ ತಿದ್ದುಪಡಿ ಮಾಡಿ ಎಂಟು ತಿಂಗಳಾದರೂ ಅಧಿಕಾರಿಗಳು ತೀರ್ಪು ನೀಡದೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಾದ-ಪ್ರತಿವಾದಗಳು ಮುಗಿದಿದ್ದರೂ ಸಹಾ ನ್ಯಾಯಾಲಯಗಳಲ್ಲಿ ಆದೇಶವನ್ನು ನೀಡದೆ ಪ್ರಕರಣಗಳು ಬಾಕಿಯಿರುವುದರಿಂದ ತಮ್ಮ ಹಂತದಲ್ಲಿಯೇ ಪರಿಶೀಲಿಸಿ ತುರ್ತಾಗಿ ತೀರ್ಪು ನೀಡಬೇಕೆಂದು ಜಿಲ್ಲಾಧಿಕಾರಿಯವರಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ವಿನಂತಿಸಿದರು.
ಜಿಲ್ಲೆಯ ಮೂಲ ವಾರಸುದಾರರು ಆದೇಶ ಪಡೆದುಕೊಂಡು ಕೆಲವು ಪ್ರಕರಣಗಳು ಅಂತಿಮವಾಗಿದ್ದರೂ ಸ್ವಾಧೀನಕ್ಕೆ ಕೆಲವು ಕ್ರಯದಾರರು ಅಡಚಣೆಯುಂಟು ಮಾಡುತ್ತಿದ್ದಾರೆ.

ಭೂಮಂಜೂರಾತಿಯ ವಿದ್ಯಮಾನಗಳನ್ನು ಸರಿಯಾಗಿ ಅಥ್ರ್ಯೆಸಿಕೊಳ್ಳದಿರುವುದೆ ಇದಕ್ಕೆ ಕಾರಣ. ಎರಡು ತಿಂಗಳ ಹಿಂದೆ ಚಳ್ಳಕೆರೆ ಟೌನ್ ಕಸಬಾ ಹೋಬಳಿಯಲ್ಲಿ ಪಿ.ಟಿ.ಸಿ.ಎಲ್. ಕಾಯ್ದೆ ಉಲ್ಲಂಘಿಸಿ ಉಪವಿಭಾಗಾಧಿಕಾರಿಗಳು ಕ್ರಯದಾರರ ಪರವಾಗಿ ಆದೇಶಿಸಿದ್ದಾರೆ. ಪಿ.ಟಿ.ಸಿ.ಎಲ್. ಕಾಯ್ದೆ ಪ್ರಕಾರ ಮೂಲ ಮಂಜೂರುದಾರರಿಗೆ ಕಾನೂನು ರೀತಿಯ ತೀರ್ಪು ನೀಡಬೇಕು. ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಪಿ.ಟಿ.ಸಿ.ಎಲ್. ಕೇಸುಗಳನ್ನು ಸ್ವಯಂ ದಾಖಲಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಕಾಯ್ದೆ ಬಗ್ಗೆ ಅರಿವು ಮೂಡಿಸಿ ತ್ವರಿತವಾಗಿ ನ್ಯಾಯ ಒದಗಿಸುವಂತೆ ಪ್ರತಿಭಟನಾನಿರತರು ಜಿಲ್ಲಾಧಿಕಾರಿಯವರನ್ನು ಕೋರಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್, ಜಿಲ್ಲಾಧ್ಯಕ್ಷ ರಾಮಚಂದ್ರ ಕೆ. ಗೌರವಾಧ್ಯಕ್ಷ ಪಿ.ಎಂ.ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷ ಮೊಹಮದ್ ರಫಿ, ರಾಘವೇಂದ್ರ ಆರ್. ವಿನೋದ್‍ಕುಮಾರ್, ಸಾಧಿಕ್ ಚನ್ನಗಿರಿ, ಕಣುಮೇಶ್, ದಾದಾಪೀರ್ ಎಸ್. ದುರ್ಗೇಶ್, ಕುಮಾರ್, ರಘು, ಮಹಾಲಿಂಗಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...