Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಟಿ.ಸಿ.ಎಲ್. ಕಾಯಿದೆ ತಿದ್ದುಪಡಿ : ಅಧಿಕಾರಿಗಳ ವಿಳಂಬ ಧೋರಣೆ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06 : ರಾಜ್ಯ ಸಚಿವ ಸಂಪುಟದಲ್ಲಿ ಪಿ.ಟಿ.ಸಿ.ಎಲ್. ಕಾಯಿದೆ ತಿದ್ದುಪಡಿ ಮಾಡಿ ಎಂಟು ತಿಂಗಳಾದರೂ ಅಧಿಕಾರಿಗಳು ತೀರ್ಪು ನೀಡದೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಾದ-ಪ್ರತಿವಾದಗಳು ಮುಗಿದಿದ್ದರೂ ಸಹಾ ನ್ಯಾಯಾಲಯಗಳಲ್ಲಿ ಆದೇಶವನ್ನು ನೀಡದೆ ಪ್ರಕರಣಗಳು ಬಾಕಿಯಿರುವುದರಿಂದ ತಮ್ಮ ಹಂತದಲ್ಲಿಯೇ ಪರಿಶೀಲಿಸಿ ತುರ್ತಾಗಿ ತೀರ್ಪು ನೀಡಬೇಕೆಂದು ಜಿಲ್ಲಾಧಿಕಾರಿಯವರಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ವಿನಂತಿಸಿದರು.
ಜಿಲ್ಲೆಯ ಮೂಲ ವಾರಸುದಾರರು ಆದೇಶ ಪಡೆದುಕೊಂಡು ಕೆಲವು ಪ್ರಕರಣಗಳು ಅಂತಿಮವಾಗಿದ್ದರೂ ಸ್ವಾಧೀನಕ್ಕೆ ಕೆಲವು ಕ್ರಯದಾರರು ಅಡಚಣೆಯುಂಟು ಮಾಡುತ್ತಿದ್ದಾರೆ.

ಭೂಮಂಜೂರಾತಿಯ ವಿದ್ಯಮಾನಗಳನ್ನು ಸರಿಯಾಗಿ ಅಥ್ರ್ಯೆಸಿಕೊಳ್ಳದಿರುವುದೆ ಇದಕ್ಕೆ ಕಾರಣ. ಎರಡು ತಿಂಗಳ ಹಿಂದೆ ಚಳ್ಳಕೆರೆ ಟೌನ್ ಕಸಬಾ ಹೋಬಳಿಯಲ್ಲಿ ಪಿ.ಟಿ.ಸಿ.ಎಲ್. ಕಾಯ್ದೆ ಉಲ್ಲಂಘಿಸಿ ಉಪವಿಭಾಗಾಧಿಕಾರಿಗಳು ಕ್ರಯದಾರರ ಪರವಾಗಿ ಆದೇಶಿಸಿದ್ದಾರೆ. ಪಿ.ಟಿ.ಸಿ.ಎಲ್. ಕಾಯ್ದೆ ಪ್ರಕಾರ ಮೂಲ ಮಂಜೂರುದಾರರಿಗೆ ಕಾನೂನು ರೀತಿಯ ತೀರ್ಪು ನೀಡಬೇಕು. ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಪಿ.ಟಿ.ಸಿ.ಎಲ್. ಕೇಸುಗಳನ್ನು ಸ್ವಯಂ ದಾಖಲಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಕಾಯ್ದೆ ಬಗ್ಗೆ ಅರಿವು ಮೂಡಿಸಿ ತ್ವರಿತವಾಗಿ ನ್ಯಾಯ ಒದಗಿಸುವಂತೆ ಪ್ರತಿಭಟನಾನಿರತರು ಜಿಲ್ಲಾಧಿಕಾರಿಯವರನ್ನು ಕೋರಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್, ಜಿಲ್ಲಾಧ್ಯಕ್ಷ ರಾಮಚಂದ್ರ ಕೆ. ಗೌರವಾಧ್ಯಕ್ಷ ಪಿ.ಎಂ.ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷ ಮೊಹಮದ್ ರಫಿ, ರಾಘವೇಂದ್ರ ಆರ್. ವಿನೋದ್‍ಕುಮಾರ್, ಸಾಧಿಕ್ ಚನ್ನಗಿರಿ, ಕಣುಮೇಶ್, ದಾದಾಪೀರ್ ಎಸ್. ದುರ್ಗೇಶ್, ಕುಮಾರ್, ರಘು, ಮಹಾಲಿಂಗಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!