Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಂಡಿತಾರಾಧ್ಯ ಶ್ರೀಗಳಿಗೆ ಡಾ. ಎಂ ಎಂ ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ

---Advertisement---

ಸಾಣೇಹಳ್ಳಿ: ಪ್ರಗತಿಪರ ಚಿಂತಕ ಡಾ. ಎಂ ಎಂ ಕಲಬುರಗಿ ಅವರ ಪ್ರಶಸ್ತಿಯನ್ನು ಪಂಡಿತಾರಾಧ್ಯ ಶ್ರೀಗಳಿಗೆ ನೀಡಲಾಗಿದೆ. ಧಾರವಾಡದ ಮಜ್ಜಿಗೆ ಪಂಚಪ್ಪ ಸಮುದಾಯ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪಂಡಿತಾರಾಧ್ಯ ಶ್ರೀಗಳು, ಪ್ರಶಸ್ತಿಯ ಬಗ್ಗೆ ಆಸಕ್ತಿಯೂ ಇಲ್ಲ. ನಿರಾಸಕ್ತಿಯೂ ಇಲ್ಲ. ಪ್ರಶಸ್ತಿಯನ್ನು ಸ್ವೀಕಾರ ಮಾಡಿದರೂ ದೊಡ್ಡವರಾಗುವುದಿಲ್ಲ. ತಿರಸ್ಕಾರ ಮಾಡಿದರೂ ದೊಡ್ಡವರಾಗುವುದಿಲ್ಲ. ಅದನ್ನು ಗೌರವದಿಂದ ಸ್ವೀಕಾರ ಮಾಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ತಮ್ಮ ಜವಾಬ್ದಾರಿಗಳನ್ನು ಹೆಚ್ಚಿಸಿಕೊಳ್ಳಬೇಕು. ಅದರಿಂದ ತನ್ನ ವ್ಯಕ್ತಿತ್ವ ಗಟ್ಟಿಕೊಳಿಸಿಕೊಳ್ಳಬೇಕು ಎಂದು ಹೇಳಿದರು.

 

ಇತ್ತೀಚಿನ‌ ದಿನಗಳಲ್ಲಿ ಸ್ವಾಮಿಗಳ ಸಂಖ್ಯೆ ಹೆಚ್ಚಾಗಿವೆ. ಆದರೆ ಸ್ವಾಮಿಗಳ ಘನತೆ, ಗೌರವ ಕಡಿಮೆಯಾಗುತ್ತಿರುವುದು ವಿಷಾದದ ಸಂಗತಿ. ಕೆಲವು ಸ್ವಾಮಿಗಳನ್ನು ನೋಡಿದರೆ ಸ್ವಾಮಿಗಳಿಗಿಂತ ಸಂಸಾರಿಗಳೆ ಎಷ್ಟೋ ವಾಸಿ ಎನಿಸುವುದು. ನಮ್ಮ ದೀಕ್ಷಾ ಗುರುಗಳಾದ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರು ಬಸವಣ್ಣನವರನ್ನು ಗೃಹಸ್ಥ ಜಗದ್ಗುರು ಎಂದು ಕರೆಯುತ್ತಿದ್ದರು. ಬಸವಣ್ಣನವರ ತತ್ವಗಳನ್ನು ಉಸಿರಾಗಿಸಿಕೊಂಡು ನಡೆ -ನುಡಿಗಳನ್ನು ಬದುಕಿನುದ್ದಕ್ಕೂ ಸಿದ್ಧಾಂತಗಳನ್ನಾಗಿ ಮಾಡಿಕೊಂಡರು ಎಂದಿದ್ದಾರೆ.

 

ಇದೆ ವೇಳೆ ಗದಗಿನ ತೋಟದಾರ್ಯ ಮಠದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿ, ಪಂಡಿತಾರಾಧ್ಯ ಶ್ರೀಗಳು ಪ್ರಗತಿಪರ ಚಿಂತನೆಗೆ ಹೆಸರಾದವರು. ಈ‌ ಪ್ರಶಸ್ತಿ ಶ್ರೀಗಳಿಗೆ ಕೊಟ್ಟು ಪ್ರಶಸ್ತಿಗೆ ನ್ಯಾಯವನ್ನು ಒದಗಿಸಿದ್ದಾರೆ. ಕಲ್ಬುರ್ಗಿಯವರು ದೈಹಿಕವಾಗಿ ಇಲ್ಲದಿದ್ದರೂ ಅವರ ಚಿಂತನೆಗಳು ಇನ್ನು ಉಳಿದಿವೆ. ಪ್ರಗತಿಪರ ಚಿಂತನೆಯನ್ನು ನಿರಂತರವಾಗಿ ಕೆಲಸ ಮಾಡಬೇಕಾಗಿದೆ. ಕಲ್ಬುರ್ಗಿಯವರ ವಿಚಾರಧಾರೆಗಳನ್ನು ಸಮಾಜದಲ್ಲಿ ಬಿತ್ತುವ ಕೆಲಸ ಆಗಬೇಕು. ಎಂ ಎಂ ಕಲ್ಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಪಡೆದುಕೊಳ್ಳುವುದಕ್ಕೂ ಅರ್ಹತೆ ಇರಬೇಕು. ಅಂತಹ ಅರ್ಹತೆ ಪಂಡಿತಾರಾಧ್ಯ ಶ್ರೀಗಳಿಗೆ ಇದೆ. ಬಸವಾದಿ ಶಿವಶರಣರ ವೈಜ್ಞಾನಿಕ, ವೈಚಾರಿಕ ವಿಚಾರಗಳನ್ನು ಪ್ರತಿಬಿಂಬಿಸುವ ಕಾರ್ಯ ಪಂಡಿತಾರಾಧ್ಯ ಶ್ರೀಗಳಿಂದ ಆಗ್ತಾ ಇದೆ. ಕಲ್ಬುರ್ಗಿಯವರ ಯೋಜನೆ ಮತ್ತು ಯೋಚನೆಗಳನ್ನು ಅಕ್ಷರಶಃ ಕಾರ್ಯರೂಪಕ್ಕೆ ಪಂಡಿತಾರಾಧ್ಯ ಶ್ರೀಗಳು ತರುತ್ತಿರುವುದು ಶ್ಲಾಘನೀಯ ಎಂದರು.

ನಾಡೋಜ ಗೊ ರು ಚನ್ನಬಸಪ್ಪ ಮಾತನಾಡಿ, ಭಾರತದಂತಹ ರಾಷ್ಟ್ರದಲ್ಲಿ ಸಂಶೋಧನೆ ಮಾಡುವುದು ಅಷ್ಟು ಸುಲಭವಲ್ಲ. ಭಾರತೀಯ ಸಂಶೋಧಕ ಅನೇಕ ಯಜ್ಞಕುಂಡಗಳನ್ನು ದಾಟಬೇಕಾಗುತ್ತದೆ ಇವು ಕಲ್ಬುರ್ಗಿಯರ ಮಾತುಗಳು. ಪ್ರಶಸ್ತಿ ಎನ್ನುವುದು ಪ್ರತಿಷ್ಠೆ, ಗೌರವಕ್ಕೆ, ಅನನ್ಯತೆಗೆ, ಮನ್ನಣೆಗೆ ಸಂದ ಗೌರವ. ಪ್ರಶಸ್ತಿ ಮೂರು ಅಂಶಗಳನ್ನು ಒಳಗೊಂಡಿದೆ. ಪ್ರಶಸ್ತಿ ಪ್ರವರ್ತಕ, ಪ್ರಶಸ್ತಿ ಪ್ರಯುಕ್ತ, ಪ್ರಶಸ್ತಿ ಪುರಸ್ಕೃತರು. ಈ ಸಮಾರಂಭದಲ್ಲಿ ಮೂರೂ ಸಂಗಮಗೊಂಡಿವೆ. ಪ್ರಶಸ್ತಿ ಪುರಸ್ಕೃತರು ತಮ್ಮ ಮಠವನ್ನು ಶರಣ ತತ್ವ ಪ್ರಸಾರದ ವೈಚಾರಿಕ ಮಠವನ್ನಾಗಿ ಮಾಡಿದರು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment