ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಅಂದ್ರೆ ಅದು ವಿಷ್ಣುಪ್ರಿಯ. ಕಣ್ಸನ್ನೆ ಹುಡುಗಿಯನ್ನ ನೋಡುವುದಕ್ಕೆ ಕರ್ನಾಟಕದ ಮಂದಿಯೂ ಕಾಯುತ್ತಿದ್ದಾರೆ. ಪಡ್ಡೆಹುಲಿ ಆದ ಮೇಲೆ ಶ್ರೇಯಸ್ ಮತ್ತೊಂದು ಅವತಾರ ನೋಡಲು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಇನ್ನೇನು ಬಿಡಿಗಡೆಯಾಗಿ ಪ್ರೇಕ್ಷಕರ ಆಸೆಗೆ ಮತ್ತಷ್ಟು ಖುಷಿ ನೀಡಲಿರುವ ವಿಷ್ಣುಪ್ರಿಯ ಸದ್ಯ ಹಾಡೊಂದರಿಂದ ಸಿಕ್ಕಾಪಟ್ಟೆ ಸೌಂಡ್ ಮಾಡ್ತಾ ಇದೆ. ಅದರಲ್ಲೂ ಆ ಹಾಡು ಟ್ರೆಂಡಿಂಗ್ ನಲ್ಲಿ ಕೂಡ ಇದೆ.
ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.
ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ… ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಷ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ಡಾ. ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.

ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ. ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.
ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್