ಮಂಡ್ಯ: ಹನುಮ ದ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯ ಹಾಗೂ ಕೆರಗೋಡು ಗ್ರಾಮವನ್ನು ಬಂದ್ ಮಾಡಲಾಗಿದೆ. ನೂರಾರು ಹಿಂದೂಪರ ಕಾರ್ಯಕರ್ತರಿಂದ ಬೈಕ್ ರ್ಯಾಲಿಯೂ ನಡೆಯಲಿದೆ. ಗ್ರಾಮದ ಆಂಜನೇಯ ದೇವಸ್ಥಾದಿಂದ ಬೈಕ್ ರ್ಯಾಲಿ ನಡೆಯಲಿದೆ.
ಕೆರಗೋಡು, ಹುಲಿವಾಹನ, ಸಾತನೂರು, ಚಿಕ್ಕಮಂಡ್ಯ ಮೂಲಕ ರ್ಯಾಲಿ ನಡೆಯಲಿದೆ. ಆಂಜನೇಯ ಸ್ವಾಮಿ ದೇವಾಲಯದ ತನಕ ರ್ಯಾಲಿ ನಡೆಯಲಿದ್ದು, ಬಳಿಕ ಡಿಸಿ ಕಚೇರುಗೆ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ ಹಿಂದೂಪರ ಸಂಘಟನೆಗಳು, ಕಾರ್ಯಕರ್ತರು, ಬಿಜೆಪಿ ನಾಯಕರು, ಮುಖಂಡರು ಕೂಡ ಭಾಗಿಯಾಗಲಿದ್ದಾರೆ.
ಗ್ರಾಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಬಾರದು ಎಂಬ ಕಾರಣಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎಲ್ಲಾ ಕಡೆ ಪೊಲೀಸರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಾತಾವರಣ ಶಾಂತವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ರ್ಯಾಲಿ ಶುರುವಾಗಲಿದೆ. ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಇನ್ನು ತಿಳಿಯಾದಂತೆ ಕಾಣುತ್ತಿಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















