Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ |  ಸರ್ಕಾರಿ ಆಸ್ಪತ್ರೆಯಲ್ಲಿ ಫೋಟೋಶೂಟ್ : ಸಾರ್ವಜನಿಕರ ಆಕ್ರೋಶ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.09 : ಮದುವೆಗೂ ಮುನ್ನ ಜೋಡಿ ಹಕ್ಕಿಗಳು ಫೋಟೋಶೂಟ್ ಮಾಡಿಸುವುದು ಕಾಮನ್ ಆಗಿದೆ. ಟ್ರೆಂಡಿಂಗ್ ಇದ್ದಂತ ಸಮಯದಲ್ಲಿ ನಾರ್ಮಲ್ ಆಗಿ ಫೋಟೋಶೂಟ್ ಮಾಡಿಸುತ್ತಾ ಇದ್ದರು. ಆದರೆ ಈಗ ಫೋಟೋಶೂಟ್ ಕ್ರೇಜ್ ಹಾಗೇ ಇದೆ. ಆದರೆ ಡಿಫ್ರೆಂಟ್ ಥೀಮ್ ನಲ್ಲಿ ಫೋಟೋಶೂಟ್ ಮಾಡಿಸಲು ಪ್ಲ್ಯಾನ್ ಮಾಡುತ್ತಾರೆ. ಕೆರೆ-ಗದ್ದೆಗಳಲ್ಲಿ, ವ್ಯವಸಾಯ ಮಾಡುವ ರೀತಿ ಸಹಜ ಜೀವನಕ್ಕೆ ಹತ್ತಿರವಿರುವಂತ ಫೋಟೋಶೂಟ್ ಮಾಡಿಸುತ್ತಾರೆ. ಅಂಥದ್ದೇ ಥಿಂಕಿಂಗ್ ನಲ್ಲಿ ಚಿತ್ರದುರ್ಗದ ವೈದ್ಯರೊಬ್ಬರು ಆಪರೇಷನ್ ಥಿಯೇಟರ್ ಬಳಕೆ ಮಾಡಿಕೊಂಡು ಪೇಚಿಗೆ ಸಿಲುಕಿದ್ದಾರೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ. ಅಭಿಷೇಕ್ ಫೋಟೋಶೂಟ್ ಮಾಡಿಸಿದವರು. ತಮ್ಮದೇ ವೃತ್ತಿ ಬದುಕನ್ನು ಆಧಾರವಾಗಿಟ್ಟುಕೊಂಡು ಫೋಟೋಶೂಟ್ ಮಾಡಿಸುವುದಕ್ಕೆಂದು ಹೊರಟಿದ್ದರು ಎನಿಸುತ್ತದೆ. ಆದರೆ ಈಗ ಟೀಕೆಗೆ, ವಿರೋಧಕ್ಕೆ ಕಾರಣವಾಗಿದ್ದಾರೆ.

ಡಾ.ಅಭಿಷೇಕ್ ಮತ್ತು ಜೋಡಿ ಆಪರೇಷನ್ ಥಿಯೇಟರ್ ನಲ್ಲಿ ತಮ್ಮ ಮದುವೆಯ ಪ್ರಿವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಡಾ. ಅಭಿಷೇಕ್ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈಗ ಅದೇ ಆಸ್ಪತ್ರೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಧು-ವರ ವಿಡಿಯೋ ಶೂಟ್ ಮಾಡಿಸಿದ್ದಾರೆ. ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ಫೋಟೋಶೂಟ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಅನ್ನು ಇವರ ಪ್ರಿವೆಡ್ಡಿಂಗ್ ಫೋಟೋಶೂಟ್ ಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment