ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮೂರು ಪಕ್ಷಗಳಿಗೆ ಗೆಲುವು ಎಂಬುದು ಬಹಳ ಮುಖ್ಯವಾಗಿದೆ. ಹೆಚ್ಚಿನ ಕಾಂಪಿಟೇಷನ್ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ಮೂರು ಪಕ್ಷಗಳು ಗೆಲ್ಲುವುದರ ಕಡೆಗೆ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಬಹುಮತದೊಂದಿಗೆ ಗೆದ್ದು ಗದ್ದಿಗೆ ಏರಿರುವ ಕಾಂಗ್ರೆಸ್ ಪಕ್ಷವನ್ನು ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಪಣ ತೊಟ್ಟಿದೆ. ಆದರೆ ಕಾಂಗ್ರೆಸ್ ನಾಯಕರು, ಗ್ಯಾರಂಟಿಗಳ ಮೂಲಕ ಮತ್ತೆ ಹೆಚ್ಚಿನ ಕ್ಷೇತ್ರಗಳನ್ನು ಪಡೆಯಬೇಕೆಂದು ಕಾಂಗ್ರೆಸ್ ಪ್ರಯತ್ನದಲ್ಲಿದೆ. ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಆಂತರಿಕ ಪಟ್ಟಿ ಸಿಕ್ಕಿದೆ.
ಜೆಡಿಎಸ್ ಹಾಗೂ ಬಿಜೆಪಿ ಒಂದಾಗಿ ಕಾಂಗ್ರೆಸ್ ವಿರುದ್ಧ ಸಮರ ಸಾರಿದೆ. ಹೀಗಿರುವಾಗ ಲೋಕಸಭಾ ಚುನಾವಣೆಯಲ್ಲಿ ಸ್ಟ್ರಾಂಗ್ ಅಭ್ಯರ್ಥಿಗಳನ್ನೇ ಹಾಕಬೇಕಾಗುತ್ತದೆ. ಹೀಗಾಗಿಯೇ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಸಭೆ ನಡೆಸಿ, ಸ್ಥಳೀಯ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಗೆ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿಪ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ.
ಈಗ ಲಭ್ಯವಾಗಿರುವ ಆಂತರಿಕ ಪಟ್ಟಿಯ ಪ್ರಕಾರ, ಬೆಳಗಾವಿಗೆ – ಸತೀಶ್ ಜಾರಕಿಹೊಳಿ, ಚಿಕ್ಕೋಡಿ – ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ, ಹಾವೇರಿ – ಹೆಚ್ ಕೆ ಪಾಟೀಲ್, ಮಂಗಳೂರು – ಯುಟಿ ಖಾದರ್, ಬಾಗಲಕೋಟೆ – ಸರ್ ನಾಯಕ್, ವೀಣಾ ಕಾಶಪ್ಪನವರ್, ಸಂಯುಕ್ತ ಶಿವಾನಂದ ಪಾಟೀಲ್, ಕಲಬುರಗಿ – ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ, ಉತ್ತರ ಕನ್ನಡ – ಆರ್ ವಿ ದೇಶಪಾಂಡೆ, ಮೈಸೂರು – ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ, ಬಳ್ಳಾರಿ – ಸೌಪರ್ಣಿಕಾ ತುಕರಾಂ, ಬೆಂಗಳೂರು ಉತ್ತರ – ಕೃಷ್ಣ ಭೈರೇಗೌಡ, ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣ ಹೆಸರು ಕೇಳಿ ಬರುತ್ತಿದೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್