Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರ್ತೂರು ಸಂತೋಷ್ ಗೆ ಸನ್ಮಾನಿಸಿದ್ದ ಪೊಲೀಸ್ ಎತ್ತಂಗಡಿ..!

---Advertisement---

ಈ ಬಾರಿಯ ಬಿಗದ ಬಾಸ್ ಮನೆಯಲ್ಲಿ ಹೆಚ್ಚು ಗಮನ ಸೆಳೆದವರಲ್ಲಿ ವರ್ತೂರು ಸಂತೋಷ್ ಕೂಡ ಒಬ್ಬರು. ಮೈಮೇಲಿದ್ದ ಒಡವೆಗಳಿಂದಾನೇ ಹೆಚ್ಚು ಗಮನ ಸೆಳೆದಿದ್ದರು. ಜೊತೆಗೆ ಹಳ್ಳಿಕಾರ್ ಒಡೆಯ ಎಂದು ಫೇಮಸ್ ಆಗಿದ್ದ, ವರ್ತೂರು ಸಂತೋಷ್ ವಿಚಾರಕ್ಕೆ ಇದ್ದ ಕ್ರೇಜ್ ಏನು ಕಡಿಮೆ ಅಲ್ಲ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೂ ವರ್ತೂರು ಸಂತೋಷ್ ಕ್ರೇಜ್ ಮುಂದುವರೆದಿದೆ. ಸನ್ಮಾನ, ಸಭೆ, ಸಮಾರಂಭಗಳು ನಡೆಯುತ್ತಲೆ ಇದೆ.

 

ವರ್ತೂರು ಸಂತೋಷ್ ಅವರಿಗೆ, ವರ್ತೂರು ಠಾಣೆಯ ಎಸ್ಐ ಆಗಿದ್ದ ತಿಮ್ಮರಾಯಪ್ಪ ಅವರು ನಿನ್ನೆಯಷ್ಟೇ ಸನ್ಮಾನ ಮಾಡಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿ, ವರ್ತೂರು ಸಂತೋಷ್ ಅವರು ಇದ್ದ ಜಾಗಕ್ಕೆ ಹೋಗಿ ಸನ್ಮಾನ ಮಾಡಿ ಬಂದಿದ್ದರು. ಇದೇ ವಿಚಾರಕ್ಕೆ ಇದೀಗ ಎಸ್ಐ ತಿಮ್ಮರಾಯಪ್ಪ ಅವರನ್ನು ಅಮಾನತು ಮಾಡಲಾಗಿದೆ.

 

ಎಸ್ಐ ತಿಮ್ಮರಾಜು ಅವರು ವರ್ತೂರು ಸಂತೋಷ್ ಇದ್ದ ಜಾಗಕ್ಕೆ ಹೋಗಿ ಸನ್ಮಾನ ಮಾಡಿದ್ದು, ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ಅವರಿದ್ದ ಜಾಗಕ್ಕೆ ಹೋಗಿ ಸನ್ಮಾನ ಮಾಡುವುದು ಏನಿತ್ತು ಎಂದೇ ಪ್ರಶ್ನಿಸಿದ್ದಾರೆ. ವರ್ತೂರು ಸಂತೋಷ್ ಅವರು ಕೂಡ ಇತ್ತಿಚೆಗೆ ಜೈಲಿಗೆ ಹೋಗಿ ಬಂದಿದ್ದರು. ಹೀಗಾಗಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದೀಗ ಎಸ್ಐ ತಿಮ್ಮರಾಯಪ್ಪ ಅವರನ್ನು ವರ್ತೂರು ಠಾಣೆಯಿಂದ ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಲಾಗಿದೆ.

ಬಿಗ್ ಬಾಸ್ ಮನೆಯಿಂದ ಬಂದ ಮೇಲೆ ವರ್ತೂರು ಸಂತೋಷ್, ತಮ್ಮ ಮನೆಯಲ್ಲಿ ದೊಡ್ಡದಾಗಿ ಕಾರ್ಯಕ್ರಮ ಮಾಡಿದ್ದರು. ಈ ಅದ್ದೂರಿ ಕಾರ್ಯಕ್ರಮಕ್ಕೆ ಬಿಗ್ ಬಾಸ್ ಮನೆಯ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಎಲ್ಲರೂ ಮತ್ತೆ ಒಟ್ಟಾಗಿ ಸೇರಿ ಸಂಭ್ರಮಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment