Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ತಂದೆ ಬಗ್ಗೆ ಮಾತನಾಡಿದ ಈಶ್ವರಪ್ಪ ಈಗ ಎಲ್ಲಿದ್ದಾರೆ..? : ಡಿಕೆ ಶಿವಕುಮಾರ್ ಆಕ್ರೋಶ

---Advertisement---

ಬೆಂಗಳೂರು: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಅಖಂಡ ಭಾರತ. ದಕ್ಷಿಣ ಭಾರತವನ್ನು ಬೇರೆ ರಾಷ್ಟ್ರವಾಗಿ ಮಾಡಬೇಕು ಎಂದು ಶಾಸಕ ವಿನಯ್ ಕುಲಕರ್ಣಿ ಮತ್ತು ಡಿಕೆ ಸುರೇಶ್ ಹೇಳಿದ್ದಾರೆ. ಈ ಇಬ್ಬರಯ ರಾಷ್ಟ್ರದ್ರೋಹಿಗಳನ್ನು ಪಕ್ಷದಿಂದ ಕಿತ್ತು ಬಿಸಾಕಿ. ಇದೇ ರೀತಿ ಮಾತನಾಡಿದರೆ ಇವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು ಮೋದಿ ಜಾರಿಗೆ ತರಬೇಕು ಎಂದು ಮನವಿ ಮಾಡುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದರು. ಇದೀಗ ಈ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.

ನಮ್ಮ ಸುದ್ದಿಗೆ ಬಂದವರದ್ದೆಲ್ಲಾ ಸೆಟಲ್ ಮೆಂಟ್ ಆಗಿದೆ. ಸಂಸದ ಡಿಕೆ ಸುರೇಶ್ ಅವರದ್ದು ಹೆದರುವ ಬ್ಲೆಡ್ ಅಲ್ಲ. ನಮ್ಮ ತಂಟೆಗೆ ಬಂದವರೆಲ್ಲಾ ಏನೇನಾಗಿದ್ದಾರೆ ಹೇಳಿ. ನಮ್ಮ ತಂದೆ ಬಗ್ಗೆ ಮಾತನಾಡಿದ ಈಶ್ವರಪ್ಪ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈಶ್ವರಪ್ಪ ಬಳಿ ಕ್ಷಮೆ ಕೇಳಿ ಎಂದು ನಾವು ಹೇಳುತ್ತಿಲ್ಲ. ಅವನದ್ದು ಒಂದು ರೌಂಡ್ ಸೆಟಲ್ ಮೆಂಟ್ ಆಗಿದೆ. ಅಸೆಂಬ್ಲಿಯಲ್ಲೂ ಏನೋ ಮಾತನಾಡಿದ್ದರು. ನಮ್ಮ ತಂದೆಯವರನ್ನು ಅವರು ನೆನಪಿಸಿಕೊಂಡಿದ್ದರು. ಈಗ ಎಲ್ಲಿದ್ದಾರೆ ಈಶ್ವರಪ್ಪ..? ಯಾರೂ ನಮ್ಮ ಸುದ್ದಿಗೆ ಬಂದಿದ್ದಾರೋ ಅವರದ್ದೆಲ್ಲ ಸೆಟಲ್ ಮೆಂಟ್ ಆಗ್ತಿದೆ. ಗುಂಡಿಕ್ಕಿ ಕೊಲ್ತೀನಿ ಅಂದ್ರೆ ಕೊಲ್ಲಲಿ ಬಿಡಿ. ಡಿ ಕೆ ಸುರೇಶ್ ಆ ಗುಂಡಿಗೆ ಹೆದರುವ ಬ್ಲಡ್ ಅಲ್ಲ. ಕೆಂಪೇಗೌಡರ ಇತಿಹಾಸ ಗೊತ್ತಿದೆ ಅಲ್ವಾ..? ನಮಗೆ ನಮ್ಮದೆ ಆಗಿರುವ ಇತಿಹಾಸವಿದೆ. ನಮ್ಮ ಸುದ್ದಿಗೆ ಬಂದವರಿಗೆ ಸೆಟಲ್ ಮೆಂಟ್ ಆಗಿರುತ್ತದೆ ಎಂದು ಗೊತ್ತಿದೆ ಎಂದು ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment