Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತಪರ ಬಜೆಟ್ ಮಂಡಿಸಲಿ : ವಾಸುದೇವಮಟ್ಟಿ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.10 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.12 ರಂದು ಮಂಡಿಸಲಿರುವ ಬಜೆಟ್ ರೈತ ಪರವಾಗಿರಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ವಾಸುದೇವಮಟ್ಟಿ ಒತ್ತಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಶನಿವಾರ ರೈತರ ಜೊತೆ ಸಭೆ ನಡೆಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳಾಯಿತು. ನೀರಾವರಿ ಯೋಜನೆಗಳು ಕುಂಠಿತಗೊಂಡಿದೆ. ಭದ್ರಾಮೇಲ್ದಂಡೆ ಯೋಜನೆ ಕಾಮಗಾರಿ ಅರೆಬರೆಯಾಗಿದೆ. ಆಲಮಟ್ಟಿ ಅಣೆಕಟ್ಟೆ ಎತ್ತರಗೊಳಿಸುವುದು, ಮಹದಾಯಿ ಯೋಜನೆ, ಬೆಣ್ಣೆಹಳ್ಳಿ, ಬಸವೇಶ್ವರ ಏತ ನೀರಾವರಿ ಯೋಜನೆ, ಇವೆಲ್ಲವುಗಳು ಪೂರ್ಣಗೊಳ್ಳಬೇಕಾಗಿರುವುದರಿಂದ ಬಜೆಟ್‍ನಲ್ಲಿ ಅನುದಾನ ಮೀಸಲಿಡಬೇಕು.

ಉಚಿತ ಭಾಗ್ಯಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಏಕೆ ಹಣ ಮೀಸಲಿಡುತ್ತಿಲ್ಲ ಎಂದು ವಾಸುದೇವಮಟ್ಟಿ ಪ್ರಶ್ನಿಸಿದರು?
ಬೆಳೆ ವಿಮೆ, ಫಸಲ್‍ಭೀಮ ಯೋಜನೆ ಇನ್ನು ರೈತರಿಗೆ ತಲುಪಿಲ್ಲ. ವಿಮೆ ಕಂಪನಿ ಹಾಗೂ ರೈತರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ಕರೆದು ಚರ್ಚಿಸಿ ರೈತ ಪರ ಬಜೆಟ್ ಮಂಡಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷೆ ಡಾ.ಹೆಚ್.ಪುಷ್ಪ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್, ಲೋಲಾಕ್ಷಮ್ಮ, ವಿಜಯಗೌಡ, ಜಯಲಕ್ಷ್ಮಿ, ಪವಿತ್ರ, ಬಸವರಾಜ್, ಪ್ರಸನ್ನ, ಎಸ್.ನವೀನ್ ಇನ್ನು ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!