ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆನೇ ಕ್ರೇಜ್. ಸಿಕ್ಕಾಪಟ್ಟೆ ಅಭಿಮಾನಿಗಳನ್ನು ಹೊಂದಿರುವ ನಟ. ದರ್ಶನ್ ಅವರ ಹುಟ್ಟುಹಬ್ಬ ಬಂತು ಅಂದ್ರೆ ಸಾಕು, ಅಭಿಮಾನಿಗಳು ಅವರ ಮನೆ ಮುಂದೆ ಕ್ಯೂ ನಿಂತಿರುತ್ತಾರೆ. ತಿಂಗಳಿಗೆ ಮುನ್ನವೇ ಸೆಲೆಬ್ರೇಷನ್ ವೆ ಪ್ರಿಪರೇಷನ್ ಮಾಡಿಕೊಳ್ಳುತ್ತಾರೆ. ಇದೀಗ ಮತ್ತೆ ಹುಟ್ಟುಹಬ್ಬದ ಸಂಭ್ರಮ ಹತ್ತಿರವಿದೆ.
ಮಾಮೂಲಿಯಂತೆ ದರ್ಶನ್, ತನ್ನ ಸೆಲೆಬ್ರೆಟಿಗಳ ಬಳಿ ಹುಟ್ಟುಹಬ್ಬವನ್ನು ಸಾರ್ಥಕವಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ. ಕೇಕು, ಹಾರ ಎಂದು ಹಣ ವ್ಯರ್ಥ ಮಾಡುವ ಬದಲು, ಸಾರ್ಥಕವಾಗುವಂತ ಕೆಲಸ ಮಾಡಲು ತಿಳಿಸಿದ್ದಾರೆ. ಅದೇ ಹಣಕ್ಕೆ ದವಸ ಧಾನ್ಯಗಳನ್ನು ತರಲು ಸೂಚನೆ ನೀಡಿದ್ದಾರೆ. ಫೆಬ್ರವರಿ 16ಕ್ಕೆ ಹುಟ್ಟುಹಬ್ಬವಿದೆ. ಆದರೆ ವಾರವಿರುವಾಗಲೇ ದರ್ಶನ್ ಅವರ ಹುಟ್ಟುಹಬ್ಬ ಶುರುವಾಗಿದೆ.
ದರ್ಶನ್ ಅವರ ಮನೆ ಮುಂದೆ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ದರ್ಶನ್ ಅವು ಮೊದಲೇ ಹೇಳಿದಂತೆ ದವಸ-ಧಾನ್ಯಗಳನ್ನು ತಂದುಕೊಡುವ ಕೆಲಸಗಳು ನಡೆಯುತ್ತಿವೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ನಿವಾಸ ಬಳಿ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ಬೆಳಗ್ಗೆಯಿಂದಾನೇ ಫ್ಯಾನ್ಸ್ ನಟನನ್ನು ನೋಡಲು ಕಾಯುತ್ತಿದ್ದಾರೆ.

ಫೆಬ್ರವರಿ 16ಕ್ಕೆ ದರ್ಶನ್ ಅವರು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅಂದು ತಮ್ಮ ಸೆಲೆಬ್ರೆಟಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಫ್ಯಾನ್ಸ್ ಕೂಡ ಅಂದಿನ ದಿನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಕಾಮನ್ ಡಿಪಿ ರಿಲೀಸ್ ಸಿದ್ಧ ಮಾಡಿದ್ದಾರೆ. ಅಂದು ದರ್ಶನ್ ಅವರ ಡೆವಿಲ್ ಸಿನಿಮಾದ ಅಪ್ಡೇಟ್ ಕೂಡ ಸಿಗಬಹುದು ಎಂಬ ನಿರೀಕ್ಷೆ ಇದೆ. ಕಾಟೇರ ಸಕ್ಸಸ್ ನಡುವೆ ಯಾವೆಲ್ಲಾ ಶುಭ ಸುದ್ದಿ ಕೊಡಬಹುದು ಎಂಬ ಕಾತುರತೆ ಫ್ಯಾನ್ಸ್ ಗಳಲ್ಲಿ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















