Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮಮಂದಿರಕ್ಕೆ 15 ದಿನಕ್ಕೆ ಹರಿದು ಬಂದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

 

ಅಯೋಧ್ಯೆ: ರಾಮಮಂದಿರ ನಿರ್ಮಾಣದ ಕನಸು ಹಲವು ವರ್ಷಗಳ ಹಿಂದಿನದ್ದು. ಕಡೆಗೂ ಈ ವರ್ಷ ನನಸಾಗಿದೆ. ಜನವರಿ 22 ರಂದು ರಾಮಜನ್ಮ ಭೂಮಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗಿದೆ. ಅಂದಿನಿಂದ ಸಾರ್ವಜನಿಕರ ಪ್ರವೇಶಕ್ಕೂ ಅನುಮತಿ ನೀಡಲಾಗಿದೆ. ಪ್ರತಿ ದಿನ ಹರಿದು ಬರುತ್ತಿರುವ ಭಕ್ತ ಸಾಗರ ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರುತ್ತಿದೆ.

ದೇಶದ ಎಲ್ಲಾ ರಾಜ್ಯಗಳಿಂದಾನೂ ಅಯೋಧ್ಯೆಗೆ ನೇರವಾಗಿ ರೈಲಿನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಹಿರಿಯರಿಂದ ಹಿಡಿದು ಕಿರಿಯರ ತನಕ ರಾಮನನ್ನು ನೋಡಲು ಹೊರಟು ನಿಂತಿದ್ದಾರೆ. ಯಾವುದೇ ರಾಜ್ಯದಿಂದ ಟ್ರೈ‌ನ್ ಹೊರಟರು ಇಡೀ ಟ್ರೈ‌ನ್ ತುಂಬಿರುತ್ತದೆ. ಹಿಂಗೆ ಪ್ರತಿದಿನ ರಾಮನನ್ನು ನೋಡಲು ಬರುವ ಭಕ್ತರ ಸಂಖ್ಯೆ, ಎರಡು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಕಳೆದ ಹದಿನೈದು ದಿನಕ್ಕೆ ಸುಮಾರು 30 ಲಕ್ಷ ಭಕ್ತಾಧಿಗಳು ಭೇಟಿ ನೀಡಿದ್ದಾರೆ. ರಾಮನನ್ನು ನೋಡಲು ಅಷ್ಟು ದೂರ ಬಂದವರು ರಾಮನಿಗೆ ಹರಕೆಯ ಕಾಣಿಕೆಯನ್ನು ನೀಡಿಯೇ ತೆರಳಿದ್ದಾರೆ. ಭಕ್ತರ ಕಾಣಿಕೆಯನ್ನು ಎಣಿಕೆ ಮಾಡಿದ್ದು, ಕೇವಲ 15 ದಿನಕ್ಕೆ 12.8ಕೋಟಿ ಕಾಣಿಕೆ ಬಂದಿದೆ. ಇದು ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ದೇಶ ವಿದೇಶಗಳಿಂದಾನೂ ಬಾಲರಾಮನನ್ನು ನೋಡಲು ಜನಸಾಗರ ಹರಿದು ಬರುತ್ತಿದೆ.

ಬಲರಾಮನ ಮೂರ್ತಿಯನ್ನು ಮೈಸೂರಿನ ಅರುಣ್ ಯೋಗಿರಾಜ್ ನಿರ್ಮಿಸಿದ್ದು, ಅಲಂಕಾರಗೊಂಡ ರಾಮನನ್ನು ನೋಡಲು ಎರಡು ಕಣ್ಣುಗಳು ಸಾಲದು. ಅಷ್ಟು ಸುಂದರವಾಗಿ, ಮಗುವಿನಂತೆ, ಮುಗುಳ್ನಗುವಿನಲ್ಲಿಯೇ ಕಂಗೊಳಿಸುತ್ತಿದ್ದಾನೆ ಬಾಲ ರಾಮ. ಹೀಗಾಗಿ ಒಮ್ಮೆ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದು ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!