Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಾವು ಮತ್ತು ಬಾಳೆ ಬೆಳೆಗಾರರಿಗೆ ಫೆಬ್ರವರಿ 15 ರಂದು ಸುಧಾರಿತ ಬೇಸಾಯ ಕ್ರಮಗಳ ತರಬೇತಿ ಕಾರ್ಯಕ್ರಮ

---Advertisement---

 

ಚಿತ್ರದುರ್ಗ ಫೆ.12:   ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.15ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ “ಮಾವು ಮತ್ತು ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವ ಹಮ್ಮಿಕೊಳ್ಳಲಾಗಿದೆ.  

ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಮಹಾಂತೇಶ್ ಮತ್ತು ಕೀಟ ಶಾಸ್ತ್ರತಜ್ಞ ಡಾ. ರುದ್ರಮುನಿ ಇವರು ಮಾವು ಮತ್ತು ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು. ನಂತರ ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಗ್ರಾಮದ ಪ್ರಗತಿಪರ ರೈತ ಬಿ.ಶಿವಮೂರ್ತಿ ಅವರು ಮಾವಿನ ಬೆಳೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಹೋಬಳಿಯ ಕೆರೆಯಾಗಲಹಳ್ಳಿಯ ಕೆ.ಎಸ್.ರಾಮಸ್ವಾಮಿ ಅವರು ಬಾಳೆ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಿದ ವಿವಿಧ ಕ್ರಮಗಳ ಕುರಿತು ತಮ್ಮ ಅನುಭವ ಹಂಚಿಕೊಳ್ಳುವರು.

ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಉಷಾರಾಣಿ ಎಂ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959),  ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931028) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...