Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರದ ವಿರುದ್ಧ ನಾಳೆ ರೈತ ಸಂಘಟನೆಯ ಪ್ರತಿಭಟನೆ : ಯಾಕೆ ಗೊತ್ತಾ..?

Facebook
Twitter
Telegram
WhatsApp

ನವದೆಹಲಿ: ರೈತರ ಬೇಡಿಕೆಗಳನ್ನು ಈಡೇರಿಸದೆ ಇರುವ ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈತ ಸಂಘಟನೆಗಳು ಪ್ರತಿಭಟನೆ ಗೆ ಮುಂದಾಗಿವೆ. ದೆಹಲಿಯ ಗಡಿಗಳಲ್ಲಿ ನಾಳೆ ಪ್ರತುಭಟನೆ ಮಾಡುವುದಾಗಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಇಂದು‌ ಕೇಂದ್ರ ಸಚಿವರ ಜೊತೆಗೆ ಸಭೆ ನಡೆಸಲಾಗುವುದು. ಸಭೆಯ ಬಳಿಕ ನಾಳಿನ ಹೋರಾಟದ ರೂಪುರೇಷೆಗಳು ಘೋಷಣೆಯಾಗಲಿದೆ. ನಾಳಿನ ಪ್ರತಿಭಟನೆಗೆ ಆಗಮಿಸುತ್ತಿಧದ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ 100ಕ್ಕೂ ಹೆಚ್ಚು ರೈತರನ್ನು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ನನ್ನ ಪತ್ನಿ ಸೇರು ಹಲವರಿಗೆ ಗಾಯವಾಗಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಇನ್ನು ಭರವಸೆಗಳನ್ನು ನೀಡಿ ಒಂದು ವರ್ಷವಾಗಿದೆ. ಆದರೂ ಸರ್ಕಾರ ಇನ್ನೂ ಬೇಡಿಕೆಯನ್ನು ಈಡೇರಿಸಿಲ್ಲ. ರೈತರ ಸಾಲ ಮನ್ನಾ, ಪಿಂಚಣಿ, ಬೆಂಬಲ ಬೆಲೆ ಕಾನೂನು ಹಾಗೂ ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಮನವಿ ಮಾಡಿದ್ದೆವು. ಆದರೆ ಕೇಂದ್ರ ಬಿಜೆಪಿ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.

ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ, ಉತ್ತರ ಪ್ರದೇಶ, ಹರುಯಾ, ಮತ್ತು ಪಂಜಾಬ್ ರಾಜ್ಯಗಳ ರೈತರು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ದೆಹಲಿಗೆ ಯಾತ್ರೆ ಹೊರಡಲು ಸಜ್ಜಾಗಿದ್ದಾರೆ. ಹೀಗಾಗಿ ದೆಹಲಿ ಪೊಲೀಸರು ಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಗಡಿಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

error: Content is protected !!