Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರೆ ನೀರಿಗಾಗಿ ಫೆಬ್ರವರಿ 21ರಂದು ಹಿರಿಯೂರು ಬಂದ್

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಫೆಬ್ರವರಿ.12 :  ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ನೀರಾವರಿ ಯೋಜನೆ ಅಪ್ಪರ್ ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತ ಮತ್ತು ಜನಪರ ಸಂಘಟನೆಗಳ ವತಿಯಿಂದ ಫೆ.21ರಂದು ಹಿರಿಯೂರು ಬಂದ್ ತೀರ್ಮಾನಿಸಲಾಗಿದೆ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತಪರ, ದಲಿತಪರ ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಮಾತನಾಡಿ ಕೇವಲ 6000ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಆರಂಭಗೊಂಡ ಈ ಕಾಮಗಾರಿ ಹನ್ನೆರಡು ಸಾವಿರ ಕೋಟಿ ವ್ಯಯಿಸಲಾಗಿದೆ.

ಕೇಂದ್ರ ಸರಕಾರ ರೂ.5300ಕೋಟಿ ಅನುದಾನ ನೀಡುವ ಮತ್ತು ರಾಷ್ಟ್ರೀಯ ಯೋಜನೆ ಯನ್ನಾಗಿ ಘೋಷಿಸುವ ಭರವಸೆ ನೀಡಿದ್ದರೂ ಅದು ಕಾರ್ಯಗತವಾಗಿಲ್ಲ. ಈ ಬಗ್ಗೆ ಸರಕಾರಗಳ ಗಮನ ಸೆಳೆಯಲು ಹೋರಾಟದ ಹಾದಿ ಅವಶ್ಯಕವಾಗಿದೆ. ಬರದ ನಾಡಿಗೆ ನೀರಿನ ಬವಣೆ ತೀರಲು ಭದ್ರಾ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಒತ್ತಡ ಹೇರುವುದು ಅನಿವಾರ್ಯವಾಗಿದೆ ಎಂದರು.

ಜಿಲ್ಲೆಯ ಜನರ ಕೂಗು ಸರಕಾರಕ್ಕೆ ತಲುಪಬೇಕು. ಆ ನಿಟ್ಟಿನಲ್ಲಿ ಸರ್ವ ಸಂಘಟನೆಗಳ ವತಿಯಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರು, ಉದ್ಯಮಿಗಳು, ವರ್ತಕರು, ಬೀದಿಬದಿ ವ್ಯಾಪರಿಗಳು, ಹೋಟೆಲ್ ಉದ್ಯಮಿಗಳು, ಸರಕಾರಿ ನೌಕರರು, ಕಾರ್ಮಿಕರು, ಜನಪರ, ಕನ್ನಡ, ದಲಿತ ಸಂಘಟನೆ ಸೇರಿದಂತೆ ಸರ್ವಪಕ್ಷದವರು ಬಂದ್‌ಗೆ ಬೆಂಬಲಿಸುವ ಮೂಲಕ ಬವಣೆಯನ್ನು ಸರಕಾರಕ್ಕೆ ಮನದಟ್ಟು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಿ.ಒ.ಶಿವಕುಮಾರ್, ದಸ್ತಗಿರಿ ಸಾಬ್, ತಿಪ್ಪೇಸ್ವಾಮಿ, ನಾಗಭೂಷಣ್, ಚೇತನ್, ಎಚ್.ಎನ್.ಮೂರ್ತಪ್ಪ, ದಾದಾಪೀರ್, ರಂಗನಾಥ್, ಡಿಎಸ್‌ಎಸ್ ರಾಜ್ಯ ಕಾರ್ಯದರ್ಶಿ ಜೀವೇಶ್, ಬಿಡಿಎಸ್‌ಎಸ್ ಕಾರ್ಯಾಧ್ಯಕ್ಷ ತಿಮ್ಮರಾಜು, ವಂದೇ ಮಾತರಂ ವೇದಿಕೆೆ ಎಂ.ಎಲ್.ಗಿರಿಧರ್, ಎನ್.ಎಸ್.ಜೋಧ, ಎಚ್.ಕೆ.ದಿವಾಕರ್ ನಾಯಕ, ಮಂಜುನಾಥ್, ಎನ್.ಬಸವರಾಜ್, ವೆಂಕಟೇಶ್, ಪಾಪಣ್ಣ, ರಮೇಶ್, ಮುರುಳಿ, ಧನಂಜಯ್, ಅನ್ಸರ ಅಲಿ, ಪ್ರತಾಪ್, ಗೀರೀಶ್ ಇತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!