Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಅಭಿವೃದ್ಧಿ ಬಗ್ಗೆ ಟೀಕೆ ಮಾಡುವವರಿಗೆ ನಾನೇ ಬಸ್ ಬುಕ್ ಮಾಡಿಕೊಡ್ತೀನಿ ಎಂದ ಕುಮಾರಸ್ವಾಮಿ..!

Facebook
Twitter
Telegram
WhatsApp

ರಾಮನಗರ: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಫಲಿತಾಂಶ ಮುಗಿದಿದ್ದು, ಎರೆಉ ಕ್ಷೇತ್ರದಲ್ಲೂ ಜೆಡಿಎಸ್ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಕುಮಾರಸ್ವಾಮಿ ಟೀಕೆ ಮಾಡುವವರಿಗೆ ತಿರುಗೇಟು ನೀಡಿದ್ದಾರೆ.

ಸಿಂದಗಿಯಲ್ಲಿ ಹಳ್ಳಿ ಹಳ್ಳಿಗಳನ್ನ ನೋಡಿಕೊಂಡು ಬಂದಿದ್ದೇನೆ. ಅಲ್ಲಿನ ಜನ ಹೇಗೆ ಬದುಕುತ್ತಿದ್ದಾರೆ ಎಂಬುದು ತಿಳಿದಿದೆ. ಅದನ್ನ ನಾನು ನೋಡಿದ್ದೇನೆ. ನನ್ನ ಸ್ವಂತ ಖರ್ಚಿನಲ್ಲೇ ಬಸ್ ಮಾಡಿಕೊಡ್ತೇನೆ. ನೀವೂ ಒಮ್ಮೆ ಅಲ್ಲಿಗೆ ಹೋಗಿ ಬನ್ನಿ ಎಂದು ತನ್ನನ್ನು ಟೀಕಿಸುವವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ನಾನು 3 ವರ್ಷ ಶಾಸಕನಾಗಿದ್ದೆ. ಸಿಎಂ ಆಗಿ 14 ತಿಂಗಳಿದ್ದೆ. ನನ್ನ ಅವಧಿಯಲ್ಲಿ ಆದ ಅಭಿವೃದ್ಧಿ ನೋಡಿ ಹಾಗೇ ಕಳೆದ 20 ವರ್ಷದಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ. ನನ್ನ ಅಭಿವೃದ್ಧಿ ಬಗ್ಗೆ ಟೀಕೆ ಮಾಡುವವರಿಗಾಗಿ ಇದನ್ನ ಹೇಳ್ತಾ ಇದ್ದೇನೆ. ನನ್ನ ಬಗ್ಗೆ ಸುಖಾ ಸುಮ್ಮನೆ ಆರೋಪ ಮಾಡಿದ್ರೆ ಅದಕ್ಕೆಲ್ಲಾ ಸೊಪ್ಪು ಹಾಕಲ್ಲ. ಕಳೆದ ಅವಧಿಯಲ್ಲಿ ಯಾವ ಅಭಿವೃದ್ಧಿ ಕೆಲಸವೇ ನಡೆದರೂ ಅದಕ್ಕೆ ಶಾಸಕರಿಗೂ ಪೇಮೆಂಟ್ ಹೋಗಬೇಕಿತ್ತು. ಇಲ್ಲವಾದರೆ ಅವರು ಗುದ್ದಲಿ ಪೂಜೆಗೆ ಬರ್ತಾನೆ ಇರ್ಲಿಲ್ಲ.

ಈ ಬಗ್ಗೆ ನಾನು ಓಪನ್ ಆಗಿ ಹೇಳ್ತೇನೆ. ಬೇಕಾದ್ರೆ ಕೆಲವೊಬ್ಬರು ಗುತ್ತಿಗೆದಾರರನ್ನ ಕೇಳಿ ನೋಡಿ.‌ಜನರಿಗೆ ಗುಣಾತ್ಮಕ ಕೆಲಸ ಮಾಡಬೇಕು. ಇದು ನನ್ನ ನೇಚರ್. ನಾವೂ ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದಕ್ಕೇನೆ ಜನ ಬದುಕುವುದಕ್ಕೆ ಆಗ್ತಿರೋದು ಎಂದು ಸಿ ಪಿ ಯೋಗೀಶ್ವರ್ ಹೆಸರೇಳದೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!