Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ ‌25 ರಂದು ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ವಸ್ತೃ ಸಂಹಿತೆ ಪಾಲಿಸಲು ಸೂಚನೆ

Facebook
Twitter
Telegram
WhatsApp

 

ಚಿತ್ರದುರ್ಗ, ಫೆ.12: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್ ಹುದ್ದೆಗಳಿಗೆ ಇದೇ ಫೆ.25ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದೆ. ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಿದೆ.

ಪುರುಷ ಮತ್ತು ಪುರುಷ ತೃತೀಯ ಲಿಂಗಿ ಅಭ್ಯರ್ಥಿಗಳು : ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದು ಕಡ್ಡಾಯ, ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸುವುದು, ಜಿಪ್ ಹಾಗೂ ಜೀನ್ಸ್ ಪ್ಯಾಂಟ್, ದೊಡ್ಡ ಬಟನ್ ಶರ್ಟ್, ಹೆಚ್ಚು ಜೇಬುಗಳಿರುವ ಪ್ಯಾಂಟ್ ಧರಿಸುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು ಮತ್ತು ಕುತ್ತಿಗೆ ಸುತ್ತಲೂ ಯಾವುದೇ ಲೋಹದ ಆಭರಣ ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯ ಲಿಂಗಿ ಮಹಿಳಾ ಅಭ್ಯರ್ಥಿಗಳಿಗೆ : ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು, ಅಥವಾ ಬಟನ್ ಹೊಂದಿರುವ ಬಟ್ಟೆ, ಹಾಗೂ ಪರೀಕ್ಷಾ ದಿನದಂದು ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್, ಎತ್ತರವಾದ ಹಾಗೂ ದಪ್ಪವಾದ ಅಡಿ ಭಾಗ ಹೊಂದಿರುವ ಹಿಮ್ಮಡಿ ಶೂ, ಚಪ್ಪಲಿ ಧರಿಸುವಂತಿಲ್ಲ. ಈ ಅಭ್ಯರ್ಥಿಗಳು ಮಂಗಳ ಸೂತ್ರ ಕಾಲುಂಗುರ ಹೊರತುಪಡಿಸಿ ಯಾವುದೇ ತರಹದ ಲೋಹದ ಆಭರಣಗಳನ್ನು ಧರಿಸುವಂತಿಲ್ಲ, ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!