Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ ‌25 ರಂದು ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ವಸ್ತೃ ಸಂಹಿತೆ ಪಾಲಿಸಲು ಸೂಚನೆ

---Advertisement---

 

ಚಿತ್ರದುರ್ಗ, ಫೆ.12: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್ ಹುದ್ದೆಗಳಿಗೆ ಇದೇ ಫೆ.25ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದೆ. ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಿದೆ.

ಪುರುಷ ಮತ್ತು ಪುರುಷ ತೃತೀಯ ಲಿಂಗಿ ಅಭ್ಯರ್ಥಿಗಳು : ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದು ಕಡ್ಡಾಯ, ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸುವುದು, ಜಿಪ್ ಹಾಗೂ ಜೀನ್ಸ್ ಪ್ಯಾಂಟ್, ದೊಡ್ಡ ಬಟನ್ ಶರ್ಟ್, ಹೆಚ್ಚು ಜೇಬುಗಳಿರುವ ಪ್ಯಾಂಟ್ ಧರಿಸುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು ಮತ್ತು ಕುತ್ತಿಗೆ ಸುತ್ತಲೂ ಯಾವುದೇ ಲೋಹದ ಆಭರಣ ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯ ಲಿಂಗಿ ಮಹಿಳಾ ಅಭ್ಯರ್ಥಿಗಳಿಗೆ : ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು, ಅಥವಾ ಬಟನ್ ಹೊಂದಿರುವ ಬಟ್ಟೆ, ಹಾಗೂ ಪರೀಕ್ಷಾ ದಿನದಂದು ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್, ಎತ್ತರವಾದ ಹಾಗೂ ದಪ್ಪವಾದ ಅಡಿ ಭಾಗ ಹೊಂದಿರುವ ಹಿಮ್ಮಡಿ ಶೂ, ಚಪ್ಪಲಿ ಧರಿಸುವಂತಿಲ್ಲ. ಈ ಅಭ್ಯರ್ಥಿಗಳು ಮಂಗಳ ಸೂತ್ರ ಕಾಲುಂಗುರ ಹೊರತುಪಡಿಸಿ ಯಾವುದೇ ತರಹದ ಲೋಹದ ಆಭರಣಗಳನ್ನು ಧರಿಸುವಂತಿಲ್ಲ, ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment