Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯೋ ಯೋಚನೆ ಮಾಡಿ ದೊಡ್ಡಗೌಡರನ್ನ ಭೇಟಿ ಮಾಡಿದರಾ ಯೋಗೀಶ್ವರ್..?

Facebook
Twitter
Telegram
WhatsApp

 

ಬೆಂಗಳೂರು: ಸದಾ ಏಕವಚನದಲ್ಲಿಯೇ ದಾಳಿ ನಡೆಸುತ್ತಿದ್ದ ಸಿಪಿ ಯೋಗೀಶ್ವರ್ ಹಾಗೂ ಕುಮಾರಸ್ವಾಮಿ ಇದೀಗ ದೋಸ್ತಿಗಳಾಗಿದ್ದಾರೆ. ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಒಡನಾಟವೂ ಜೋರಾಗಿದೆ. ನಿನ್ನೆಯಷ್ಟೇ ಸಿ ಪಿ ಯೋಗೀಶ್ವರ್ ಅವರು ಕೂಡ ದೇವೇಗೌಡರ ಮನೆಗೆ ಹೋಗಿ ಭೇಟಿ ಮಾಡಿ ಬಂದಿದ್ದಾರೆ. ಅದರಲ್ಲೂ ಮಧ್ಯರಾತ್ರಿ ರಹಸ್ಯ ಮಾತುಕತೆ ನಡೆಸಿದ್ದಾರೆ.

 

ಸಿ ಪಿ ಯೋಗೀಶ್ವರ್ ಅವರ ರಹಸ್ಯ ಭೇಟಿಯಲ್ಲಿ ಒಂದೇ ಕಲ್ಲಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಪ್ಲ್ಯಾನ್ ರೂಪಿತವಾಗಿದೆ ಎನ್ನಲಾಗಿದೆ. ಒಂದು ಡಿಕೆ ಶಿವಕುಮಾರ್ ಬ್ರದರ್ಸ್ ಗೆ ಟಕ್ಕರ್ ಕೊಡುವುದು ಹಾಗೂ ಮತ್ತೊಂದು ಚನ್ನಪಟ್ಟಣವನ್ನು ಭದ್ರವಾಗಿ ಉಳಿಸಿಕೊಳ್ಳುವುದೇ ಆಗಿದೆ. ಹೀಗಾಗಿ‌ ಮಧ್ಯರಾತ್ರಿಯಲ್ಲಿ ದೇವೇಗೌಡರ ಬಳಿ ಚರ್ಚೆ ಮಾಡಿದ್ದಾರೆ.

ಸತತ ಎರಡು ಗಂಟೆಗಳ ಕಾಲ ಮಾತನಾಡಿರುವ ಸಿ ಪಿ ಯೋಗೀಶ್ವರ್, ಬೆಂಗಳೂರು ಗ್ರಾಮಾಂತರದ ಬಗ್ಗೆ ಹೆಚ್ಚಿನದಾಗಿ ಮಾತನಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಟಿಕೆಟ್ ಬಿಜೆಪಿಗೆ ಬೇಡ. ಜೆಡಿಎಸ್ ಪಕ್ಷದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ. ಮಾಜಿ ಸಿಎಂ ಕುಮಾರಸ್ವಾಮಿ ಅವರೇ ಕಣಕ್ಕೆ ಇಳಿದರೆ ಬಹಳ ಸೂಕ್ತ. ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡದೆ ಇದ್ದರೆ ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಿ. ಈ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಿದರೆ ಗೆಲುವು ಖಂಡಿತ ಸಿಗಲಿದೆ. ಇಬ್ಬರಲ್ಲಿ ಯಾರೇ ನಿಂತರು ಗೆಲ್ಲಿಸಿಕೊಂಡು ಬರುವ ಜವಬ್ದಾರಿಯನ್ನು ನಾನೇ ಹೊರುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಮೂಲಕ ಯೋಗೀಶ್ವರ್ ಯೋಚನೆಯೇ ಬೇರೆ ಇದೆ. ಕುಮಾರಸ್ವಾಮಿ ಅವರು ಮಂಡ್ಯ ಅಥವಾ ಗ್ರಾಮಾಂತರದಲ್ಲಿ ಸ್ಪರ್ಧಿಸಿದರೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಇರುವುದಿಲ್ಲ ಎಂಬುದೇ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!